ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ವಿದ್ಯಾರ್ಥಿ ಮೇಲೆ ಹಲ್ಲೆ; ನಾಲ್ವರ ಬಂಧನ

Last Updated 23 ಮಾರ್ಚ್ 2019, 18:53 IST
ಅಕ್ಷರ ಗಾತ್ರ

ಬೆಂಗಳೂರು: ಎಚ್‌ಎಎಲ್‌ ಬಳಿಯ ಎಇಸಿಎಸ್ ಬಡಾವಣೆಯಲ್ಲಿ ಕಾಶ್ಮೀರದ ವಿದ್ಯಾರ್ಥಿ ಅಬ್ಸರ್ ಜಾಹೋರ್ ಧರ್‌ ಎಂಬುವರ ಮೇಲೆ ಹಲ್ಲೆ ಮಾಡಲಾಗಿದ್ದು, ಆ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

‘ಕುಂದಲಹಳ್ಳಿಯ ನಿವಾಸಿಗಳಾದ ನಿತಿನ್, ಮಂಜೇಶ್, ಗೌತಮ್ ಹಾಗೂ ಅಭಿ ಬಂಧಿತರು. ಆರೋಪಿಗಳಿಂದ ಹಲ್ಲೆಗೀಡಾಗಿರುವ ಅಬ್ಸರ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಸಿಎಂಆರ್‌ಐಟಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಬ್ಸರ್, ಇದೇ 19ರಂದು ಕಾಫಿ ಕುಡಿಯಲು ಹೋಗಿದ್ದರು. ಅಲ್ಲಿದ್ದ ಆರೋಪಿಗಳು, ‘ಏನೋ ಯುವತಿಯನ್ನು ಗುರಾಯಿಸುತ್ತಿಯಾ’ ಎಂದು ಜಗಳ ತೆಗೆದಿದ್ದರು. ಮರುದಿನ ಎಇಸಿಎಸ್ ಬಡಾವಣೆಯಲ್ಲಿ ಅಬ್ಸರ್‌ನನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದರು’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT