ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕನ ಮೇಲೆ ದಾಳಿ; ಚಾಕು ಇರಿತ

Last Updated 9 ನವೆಂಬರ್ 2021, 14:32 IST
ಅಕ್ಷರ ಗಾತ್ರ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗಿದ್ದ ಕಾರ್ಮಿಕ ತಾಯಪ್ಪ (20) ಎಂಬುವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದು, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

‘ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ತೀವ್ರ ಗಾಯಗೊಂಡಿರುವ ತಾಯಪ್ಪ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ರಾಯಚೂರು ಜಿಲ್ಲೆಯ ದೇವದುರ್ಗದ ತಾಯಪ್ಪ, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದರು. ಅದೇ ಕಟ್ಟಡದಲ್ಲೇ ವಾಸವಿದ್ದರು.’

‘ತಾಯಪ್ಪ ಎಂದಿನಂತೆ ಕಟ್ಟಡದಲ್ಲಿ ಮಲಗಿದ್ದರು. ತಡರಾತ್ರಿ ಕಟ್ಟಡದೊಳಗೆ ನುಗ್ಗಿದ್ದ ಆರೋಪಿಗಳು, ದಾಳಿ ಮಾಡಿ ಚಾಕುವಿನಿಂದ ಇರಿದು ಓಡಿ ಹೋಗಿದ್ದಾರೆ. ಅವರು ಯಾರು ಎಂಬುದು ತಾಯಪ್ಪ ಅವರಿಗೆ ಗೊತ್ತಿಲ್ಲ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಹೇಳಿಕೆ ‍ಪಡೆಯಲಾಗುವುದು’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT