<p><strong>ಬೆಂಗಳೂರು:</strong> ತುಮಕೂರು ಹಾಗೂ ಚಿಕ್ಕಬಳ್ಳಾಪುರದ ತೋಟದ ಮನೆಗಳಲ್ಲಿ ಅನಧಿಕೃತವಾಗಿ ಪಾನ್ ಮಸಾಲ ತಯಾರಿಸುತ್ತಿದ್ದ ಅಡ್ಡೆಗಳ ಮೇಲೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ₹ 21 ಲಕ್ಷ ದಂಡ ವಿಧಿಸಿ, ಸ್ಥಳದಲ್ಲೇ ₹ 13 ಲಕ್ಷ ವಸೂಲು ಮಾಡಿದ್ದಾರೆ.</p>.<p>ತುಮಕೂರು ಜಿಲ್ಲೆಯಲ್ಲಿ ಮೂರು ಕಡೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ಕಡೆ ದಾಳಿ ನಡೆಸಲಾಗಿದೆ. ಶಿರಾ ತೋಟದ ಮನೆ ಗೋದಾಮೊಂದರಲ್ಲಿ 340 ಚೀಲ ಕಚ್ಚಾ ತಂಬಾಕನ್ನು ಪತ್ತೆ ಹಚ್ಚಲಾಗಿದ್ದು, ಹೆಚ್ಚಿನ ತನಿಖೆಗಾಗಿ ತೋಟದ ಮನೆಗೆ ಬೀಗಮುದ್ರೆ ಹಾಕಲಾಗಿದೆ.</p>.<p>ವಾಣಿಜ್ಯ ಇಲಾಖೆಯ ಹೆಚ್ಚುವರಿ ಆಯುಕ್ತ ನಿತೇಶ ಪಾಟೀಲರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪಾನ್ ಮಸಾಲ ಉತ್ಪಾದನೆಗೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಶ್ರೀಕರ್ ತಿಳಿಸಿದ್ದಾರೆ.</p>.<p>ಪಾನ್ ಮಸಾಲ ತಯಾರಕರು 2 ತಿಂಗಳಿಗೊಮ್ಮೆ ಜಾಗ ಬದಲಾಯಿಸುತ್ತಿದ್ದರು. ಒಂದು ಕಡೆ ಪಾನ್ ಮಸಾಲ ಉತ್ಪಾದಿಸಿದರೆ ಮತ್ತೊಂದೆಡೆ ಪ್ಯಾಕಿಂಗ್ ಮಾಡುತ್ತಿದ್ದರು. ಕಾರ್ಯಾಚರಣೆಗೆ ತೋಟದ ಮನೆಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಅಧಿಕ ಪ್ರಮಾಣದಲ್ಲಿ ಕಚ್ಚಾ ವಸ್ತುಗಳು ಹಾಗೂ ಸಿದ್ಧ ಉತ್ಪನ್ನಗಳನ್ನು ದಾಸ್ತಾನಿಡುತ್ತಿರಲಿಲ್ಲ ಎನ್ನಲಾಗಿದೆ.</p>.<p>2019ರ ಡಿಸೆಂಬರ್ನಿಂದ ಪಾನ್ ಮಸಾಲ ತಯಾರಿಸುತ್ತಿದ್ದುದ್ದಾಗಿ ಆರೋಪಿಗಳು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕಚ್ಚಾವಸ್ತುಗಳನ್ನು ಪೂರೈಸಿ, ಪ್ಯಾಕೆಟ್ಗಳನ್ನು ಕೊಂಡೊಯ್ದು ವಿತರಿಸುತ್ತಿದ್ದ ಪ್ರಮುಖ ಆರೋಪಿ ಸಿಗಬೇಕಾಗಿದೆ.</p>.<p>ಪಾನ್ ಮಸಾಲ ತಯಾರಿಕೆ ಮತ್ತು ಸಾಗಣೆ ಮೇಲೆ ವಾಣಿಜ್ಯ ಇಲಾಖೆ ಅಧಿಕಾರಿಗಳು ನಿಗಾ ಇಟ್ಟಿದ್ದು, ಜಿಎಸ್ಟಿ ತೆರಿಗೆ ತಪ್ಪಿಸುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿಗಳಿದ್ದರೆ ಜಾರಿ ವಿಭಾಗ, ದಕ್ಷಿಣ ವಲಯದ ನಿಯಂತ್ರಣ ಕೊಠಡಿ ದೂರವಾಣಿ– 080– 25704970 ತಿಳಿಸಲು ವಾಣಿಜ್ಯ ಇಲಾಖೆ ಆಯುಕ್ತರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತುಮಕೂರು ಹಾಗೂ ಚಿಕ್ಕಬಳ್ಳಾಪುರದ ತೋಟದ ಮನೆಗಳಲ್ಲಿ ಅನಧಿಕೃತವಾಗಿ ಪಾನ್ ಮಸಾಲ ತಯಾರಿಸುತ್ತಿದ್ದ ಅಡ್ಡೆಗಳ ಮೇಲೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ₹ 21 ಲಕ್ಷ ದಂಡ ವಿಧಿಸಿ, ಸ್ಥಳದಲ್ಲೇ ₹ 13 ಲಕ್ಷ ವಸೂಲು ಮಾಡಿದ್ದಾರೆ.</p>.<p>ತುಮಕೂರು ಜಿಲ್ಲೆಯಲ್ಲಿ ಮೂರು ಕಡೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ಕಡೆ ದಾಳಿ ನಡೆಸಲಾಗಿದೆ. ಶಿರಾ ತೋಟದ ಮನೆ ಗೋದಾಮೊಂದರಲ್ಲಿ 340 ಚೀಲ ಕಚ್ಚಾ ತಂಬಾಕನ್ನು ಪತ್ತೆ ಹಚ್ಚಲಾಗಿದ್ದು, ಹೆಚ್ಚಿನ ತನಿಖೆಗಾಗಿ ತೋಟದ ಮನೆಗೆ ಬೀಗಮುದ್ರೆ ಹಾಕಲಾಗಿದೆ.</p>.<p>ವಾಣಿಜ್ಯ ಇಲಾಖೆಯ ಹೆಚ್ಚುವರಿ ಆಯುಕ್ತ ನಿತೇಶ ಪಾಟೀಲರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪಾನ್ ಮಸಾಲ ಉತ್ಪಾದನೆಗೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಶ್ರೀಕರ್ ತಿಳಿಸಿದ್ದಾರೆ.</p>.<p>ಪಾನ್ ಮಸಾಲ ತಯಾರಕರು 2 ತಿಂಗಳಿಗೊಮ್ಮೆ ಜಾಗ ಬದಲಾಯಿಸುತ್ತಿದ್ದರು. ಒಂದು ಕಡೆ ಪಾನ್ ಮಸಾಲ ಉತ್ಪಾದಿಸಿದರೆ ಮತ್ತೊಂದೆಡೆ ಪ್ಯಾಕಿಂಗ್ ಮಾಡುತ್ತಿದ್ದರು. ಕಾರ್ಯಾಚರಣೆಗೆ ತೋಟದ ಮನೆಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಅಧಿಕ ಪ್ರಮಾಣದಲ್ಲಿ ಕಚ್ಚಾ ವಸ್ತುಗಳು ಹಾಗೂ ಸಿದ್ಧ ಉತ್ಪನ್ನಗಳನ್ನು ದಾಸ್ತಾನಿಡುತ್ತಿರಲಿಲ್ಲ ಎನ್ನಲಾಗಿದೆ.</p>.<p>2019ರ ಡಿಸೆಂಬರ್ನಿಂದ ಪಾನ್ ಮಸಾಲ ತಯಾರಿಸುತ್ತಿದ್ದುದ್ದಾಗಿ ಆರೋಪಿಗಳು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕಚ್ಚಾವಸ್ತುಗಳನ್ನು ಪೂರೈಸಿ, ಪ್ಯಾಕೆಟ್ಗಳನ್ನು ಕೊಂಡೊಯ್ದು ವಿತರಿಸುತ್ತಿದ್ದ ಪ್ರಮುಖ ಆರೋಪಿ ಸಿಗಬೇಕಾಗಿದೆ.</p>.<p>ಪಾನ್ ಮಸಾಲ ತಯಾರಿಕೆ ಮತ್ತು ಸಾಗಣೆ ಮೇಲೆ ವಾಣಿಜ್ಯ ಇಲಾಖೆ ಅಧಿಕಾರಿಗಳು ನಿಗಾ ಇಟ್ಟಿದ್ದು, ಜಿಎಸ್ಟಿ ತೆರಿಗೆ ತಪ್ಪಿಸುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿಗಳಿದ್ದರೆ ಜಾರಿ ವಿಭಾಗ, ದಕ್ಷಿಣ ವಲಯದ ನಿಯಂತ್ರಣ ಕೊಠಡಿ ದೂರವಾಣಿ– 080– 25704970 ತಿಳಿಸಲು ವಾಣಿಜ್ಯ ಇಲಾಖೆ ಆಯುಕ್ತರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>