‘ಹಲ್ಲೆಗೆ ಒಳಗಾದ ಮೂವರು ಮಧ್ಯಾಹ್ನ 3.20ರ ಸುಮಾರಿಗೆ ಕಾರಿನಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಜಿ ಹಳ್ಳಿಯಿಂದ ಚಿಕ್ಕಬೆಟ್ಟಹಳ್ಳಿ ರಸ್ತೆ ಮಾರ್ಗವಾಗಿ ಎಂ.ಎಸ್.ಪಾಳ್ಯದಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಗೆ ಹೋಗುತ್ತಿದ್ದರು. ಕಾರಿನಲ್ಲಿ ಶ್ರೀರಾಮನ ಭಾವಚಿತ್ರದ ಧ್ವಜ ಕಟ್ಟಿಕೊಂಡಿದ್ದು, ಜತೆಗೆ ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.