<p><strong>ಬೆಂಗಳೂರು</strong>: ಪ್ರತ್ಯೇಕ ಪ್ರಕರಣಗಳಲ್ಲಿ, ಪಾದಚಾರಿಗಳಿಂದ ಮೊಬೈಲ್ ಹಾಗೂ ಹಣ ಕಸಿದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಜೂನ್ 23ರಂದು ಠಾಣಾ ವ್ಯಾಪ್ತಿಯ ಹೊರವರ್ತುಲ ರಸ್ತೆಯಲ್ಲಿ ನಡೆದು ತೆರಳುತ್ತಿದ್ದ ವ್ಯಕ್ತಿಯೊಬ್ಬರಿಂದ ಮೊಬೈಲ್ ಕಸಿದು ಪರಾರಿಯಾಗಿದ್ದ ಬಿಹಾರದ ರಾಕೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹20 ಸಾವಿರ ಮೌಲ್ಯದ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ.</p>.<p>‘ಹೊರವರ್ತುಲ ರಸ್ತೆಯಲ್ಲಿರುವ ಎಟಿಎಂನಲ್ಲಿ ವ್ಯಕ್ತಿಯೊಬ್ಬರು ₹4 ಸಾವಿರ ಹಣ ಡ್ರಾ ಮಾಡಿಕೊಂಡು ಮನೆಗೆ ನಡೆದು ತೆರಳುತ್ತಿದ್ದರು. ಆಗ ಬೈಕ್ನಲ್ಲಿ ಬಂದ ಇಬ್ಬರು ಆರೋಪಿಗಳು, ಮೊಬೈಲ್ ಹಾಗೂ ಹಣ ಕಸಿದು ಪರಾರಿ ಆಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಮತ್ತೊಂದು ಪ್ರಕರಣದಲ್ಲಿ ವಿಭೂತಿಪುರದ ಶಾಲೆಯ ಬಳಿ ವ್ಯಕ್ತಿಯೊಬ್ಬರಿಂದ ಮೊಬೈಲ್ ಕಸಿದು ಪರಾರಿಯಾಗಿದ್ದ ಆರೋಪಿಗಳಾದ ಈರಣ್ಣ, ರಾಜೇಶ್ಕುಮಾರ್ ಹಾಗೂ ರಯಾನ್ ಮ್ಯಾಥ್ಯು ಎಂಬುವವರನ್ನು ಬಂಧಿಸಲಾಗಿದೆ.</p>.<p>‘ಹಣ ನೀಡುವಂತೆ ಬೆದರಿಕೆ ಹಾಕಿದ್ದ ಆರೋಪಿಗಳು, ಹಣವಿಲ್ಲದ ಎಂದಾಗ ಕತ್ತಿಯಿಂದ ಹಲ್ಲೆ ನಡೆಸಿದ್ದರು. ಕ್ಯೂಆರ್ ಕೋಡ್ ಮೂಲಕ ₹4 ಸಾವಿರ ವರ್ಗಾವಣೆ ಮಾಡಿಸಿಕೊಂಡು ಪರಾರಿ ಆಗಿದ್ದರು. ಮೊಬೈಲ್ ಸಹ ಕಸಿದುಕೊಂಡಿದ್ದರು. ಹಣ ಕಳೆದುಕೊಂಡವರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹50 ಸಾವಿರ ಮೌಲ್ಯದ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಆಭರಣ ಕಳ್ಳತನ–ಬಂಧನ: ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ ಎಚ್ಎಎಲ್ನ ನಲ್ಲೂರು ಫಾರಂ ನಿವಾಸಿ ಮಲ್ಲಿಕಾರ್ಜುನ್(24) ಎಂಬಾತನನ್ನು ಇದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 25 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>‘ಠಾಣಾ ವ್ಯಾಪ್ತಿಯ ಮನೆಯೊಂದರ ಮಾಲೀಕರು, ಕಿಟಕಿ ಬಳಿ ಮನೆ ಕೀಲಿಯನ್ನು ಬಚ್ಚಿಟ್ಟು ಕೆಲಸಕ್ಕೆ ತೆರಳಿದ್ದರು. ಮನೆ ಬಳಿಗೆ ಬಂದಿದ್ದ ಆರೋಪಿ ಕೀಲಿಯನ್ನು ಹುಡುಕಿ ಬೀಗ ತೆಗೆದು ಚಿನ್ನಾಭರಣ ಕಳವು ಮಾಡಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಮಲ್ಲಿಕಾರ್ಜುನ್ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆ ಜೀವನ್ ಭಿಮಾ ನಗರ ಠಾಣೆಯಲ್ಲಿ ನಾಲ್ಕು, ಎಚ್ಎಎಲ್ ಠಾಣೆಯಲ್ಲಿ ಎರಡು ಹಾಗೂ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದ್ದವು’ ಎಂದು ಪೊಲೀಸರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರತ್ಯೇಕ ಪ್ರಕರಣಗಳಲ್ಲಿ, ಪಾದಚಾರಿಗಳಿಂದ ಮೊಬೈಲ್ ಹಾಗೂ ಹಣ ಕಸಿದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಜೂನ್ 23ರಂದು ಠಾಣಾ ವ್ಯಾಪ್ತಿಯ ಹೊರವರ್ತುಲ ರಸ್ತೆಯಲ್ಲಿ ನಡೆದು ತೆರಳುತ್ತಿದ್ದ ವ್ಯಕ್ತಿಯೊಬ್ಬರಿಂದ ಮೊಬೈಲ್ ಕಸಿದು ಪರಾರಿಯಾಗಿದ್ದ ಬಿಹಾರದ ರಾಕೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹20 ಸಾವಿರ ಮೌಲ್ಯದ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ.</p>.<p>‘ಹೊರವರ್ತುಲ ರಸ್ತೆಯಲ್ಲಿರುವ ಎಟಿಎಂನಲ್ಲಿ ವ್ಯಕ್ತಿಯೊಬ್ಬರು ₹4 ಸಾವಿರ ಹಣ ಡ್ರಾ ಮಾಡಿಕೊಂಡು ಮನೆಗೆ ನಡೆದು ತೆರಳುತ್ತಿದ್ದರು. ಆಗ ಬೈಕ್ನಲ್ಲಿ ಬಂದ ಇಬ್ಬರು ಆರೋಪಿಗಳು, ಮೊಬೈಲ್ ಹಾಗೂ ಹಣ ಕಸಿದು ಪರಾರಿ ಆಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಮತ್ತೊಂದು ಪ್ರಕರಣದಲ್ಲಿ ವಿಭೂತಿಪುರದ ಶಾಲೆಯ ಬಳಿ ವ್ಯಕ್ತಿಯೊಬ್ಬರಿಂದ ಮೊಬೈಲ್ ಕಸಿದು ಪರಾರಿಯಾಗಿದ್ದ ಆರೋಪಿಗಳಾದ ಈರಣ್ಣ, ರಾಜೇಶ್ಕುಮಾರ್ ಹಾಗೂ ರಯಾನ್ ಮ್ಯಾಥ್ಯು ಎಂಬುವವರನ್ನು ಬಂಧಿಸಲಾಗಿದೆ.</p>.<p>‘ಹಣ ನೀಡುವಂತೆ ಬೆದರಿಕೆ ಹಾಕಿದ್ದ ಆರೋಪಿಗಳು, ಹಣವಿಲ್ಲದ ಎಂದಾಗ ಕತ್ತಿಯಿಂದ ಹಲ್ಲೆ ನಡೆಸಿದ್ದರು. ಕ್ಯೂಆರ್ ಕೋಡ್ ಮೂಲಕ ₹4 ಸಾವಿರ ವರ್ಗಾವಣೆ ಮಾಡಿಸಿಕೊಂಡು ಪರಾರಿ ಆಗಿದ್ದರು. ಮೊಬೈಲ್ ಸಹ ಕಸಿದುಕೊಂಡಿದ್ದರು. ಹಣ ಕಳೆದುಕೊಂಡವರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹50 ಸಾವಿರ ಮೌಲ್ಯದ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಆಭರಣ ಕಳ್ಳತನ–ಬಂಧನ: ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ ಎಚ್ಎಎಲ್ನ ನಲ್ಲೂರು ಫಾರಂ ನಿವಾಸಿ ಮಲ್ಲಿಕಾರ್ಜುನ್(24) ಎಂಬಾತನನ್ನು ಇದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 25 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>‘ಠಾಣಾ ವ್ಯಾಪ್ತಿಯ ಮನೆಯೊಂದರ ಮಾಲೀಕರು, ಕಿಟಕಿ ಬಳಿ ಮನೆ ಕೀಲಿಯನ್ನು ಬಚ್ಚಿಟ್ಟು ಕೆಲಸಕ್ಕೆ ತೆರಳಿದ್ದರು. ಮನೆ ಬಳಿಗೆ ಬಂದಿದ್ದ ಆರೋಪಿ ಕೀಲಿಯನ್ನು ಹುಡುಕಿ ಬೀಗ ತೆಗೆದು ಚಿನ್ನಾಭರಣ ಕಳವು ಮಾಡಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಮಲ್ಲಿಕಾರ್ಜುನ್ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆ ಜೀವನ್ ಭಿಮಾ ನಗರ ಠಾಣೆಯಲ್ಲಿ ನಾಲ್ಕು, ಎಚ್ಎಎಲ್ ಠಾಣೆಯಲ್ಲಿ ಎರಡು ಹಾಗೂ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದ್ದವು’ ಎಂದು ಪೊಲೀಸರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>