ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಕ್ಯಾಬ್‌ ಚಾಲಕನ ಬಂಧನ

Last Updated 13 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ತನ್ನನ್ನು ಪ್ರೀತಿಸಲು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪದಡಿ ಜನಾರ್ದನ್ (26) ಎಂಬಾತನನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿಯಾದ ಆರೋಪಿ, ಕ್ಯಾಬ್ ಚಾಲಕ. ಆತನ ವಿರುದ್ಧ ಯುವತಿ ದೂರು ನೀಡಿದ್ದಳು. ಆತ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಹಲವು ವರ್ಷಗಳಿಂದ ಯುವತಿಯ ಹಿಂದೆ ಬಿದ್ದಿದ್ದ ಆರೋಪಿ, ಆಕೆಯ ಸ್ನೇಹ ಸಂಪಾದಿಸಿದ್ದ. ತನ್ನನ್ನು ಪ್ರೀತಿಸುವಂತೆ ಕೆಲವು ದಿನಗಳಿಂದ ಒತ್ತಾಯಿಸಲಾರಂಭಿಸಿದ್ದ. ಆತನ ಕಿರುಕುಳದಿಂದ ಬೇಸತ್ತ ಯುವತಿ, ‘ನಾನು ನಿನ್ನನ್ನು ಪ್ರೀತಿಸುವುದಿಲ್ಲ. ನಿತ್ಯವೂ ಹಿಂಬಾಲಿಸಬೇಡ’ ಎಂದು ಹೇಳಿದ್ದಳು.

ಅಷ್ಟಕ್ಕೆ ಕೋಪಗೊಂಡಿದ್ದ ಆರೋಪಿ, ಚೊಕ್ಕಸಂದ್ರದಲ್ಲಿ ಬುಧವಾರ ಮಧ್ಯಾಹ್ನ ಯುವತಿಯನ್ನು ಅಡ್ಡಗಟ್ಟಿ ಜಗಳ ತೆಗೆದಿದ್ದ. ಅದೇ ವೇಳೆ ಯುವತಿಯ ಹೊಟ್ಟೆಗೆ ಚಾಕುವಿನಿಂದ ಇರಿದು ಓಡಿಹೋಗಿದ್ದ.

‘ರಕ್ಷಣೆಗೆ ಬಂದಿದ್ದ ಸ್ಥಳೀಯರೇ ಯುವತಿಯನ್ನು ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿದ್ದರು. ಯುವತಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ಪೊಲೀಸರು ಹೇಳಿದರು.

‘ಕೃತ್ಯದ ಬಳಿಕ ಆರೋಪಿ, ಸಂಬಂಧಿಕರ ಮನೆಗೆ ಹೋಗಿ ತಲೆಮರೆಸಿಕೊಂಡಿದ್ದ. ಆ ಮನೆಯಲ್ಲಿ ಆತನನ್ನು ಬಂಧಿಸಲಾಯಿತು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT