<p><strong>ಬೆಂಗಳೂರು: </strong>‘ಕನ್ನಡ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸುವ ಪ್ರಯತ್ನಗಳ ಮೂಲಕ ಸಂಸ್ಥೆಯ ಚೈತನ್ಯವನ್ನು ಕುಂದಿಸಲಾಗುತ್ತಿದೆ’ ಎಂದು ಚಿಂತಕ ಬಂಜಗೆರೆ ಜಯಪ್ರಕಾಶ್ ಹೇಳಿದರು.</p>.<p>ಬಂಡಾಯ ಸಾಹಿತ್ಯ ಸಂಘಟನೆ ಭಾನುವಾರ ‘ಕನ್ನಡ ವಿಶ್ವವಿದ್ಯಾಲಯದ ಸ್ಥಿತಿ–ಗತಿ‘ ಕುರಿತು ಆಯೋಜಿಸಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ’ಕನ್ನಡ ವಿಶ್ವವಿದ್ಯಾಲಯಕ್ಕೆ ಸಿಂಡಿಕೇಟ್ ಸದಸ್ಯರ ನೇಮಕ, ಕ್ರಿಯಾ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ವಿಶ್ಲೇಷಿಸಿದಾಗ ಬಲಪಂಥೀಯರು ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸಲು ನಡೆಸುತ್ತಿರುವ ಪ್ರಯತ್ನಗಳು ತಿಳಿಯುತ್ತವೆ‘ ಎಂದರು.</p>.<p>’ಕನ್ನಡದ ಅರಿವು ವಿಸ್ತರಿಸುವ ಜತೆ ಹಿರಿಮೆ ಹೆಚ್ಚಿಸಿದ ವಿಶ್ವವಿದ್ಯಾಲಯದಲ್ಲಿ ಈಗ ಮುಕ್ತ ಚಿಂತನೆಗಳಿಗೆ ಅವಕಾಶಗಳು ಇಲ್ಲದಂತಹ ವಾತಾವರಣ ಸೃಷ್ಟಿಯಾಗುತ್ತಿದೆ‘ ಎಂದರು.</p>.<p>’ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವೂ ನೀಡುತ್ತಿಲ್ಲ. ಸಂಸ್ಕೃತ ವಿಶ್ವವಿದ್ಯಾಲ<br />ಯಕ್ಕೆ ಸಾಕಷ್ಟು ಅನುದಾನ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕನ್ನಡದ ಭಾಷೆಗಾಗಿಯೇ ಮೀಸಲಾಗಿರುವ ಏಕೈಕ ವಿಶ್ವವಿದ್ಯಾಲಯಕ್ಕೆ ಅನುದಾನ ನೀಡಲು ಹಿಂದೇಟು ಹಾಕುತ್ತಿದೆ‘ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಮಾತನಾಡಿ, ’ಕನ್ನಡ ವಿಶ್ವ ವಿದ್ಯಾಲಯದ ಬಗ್ಗೆ ಚರ್ಚಿಸುವ ಪರಿಸ್ಥಿತಿ ಬಂದಿರುವುದೇ ವಿಪರ್ಯಾಸ. ಕನ್ನಡ ವಿಶ್ವವಿದ್ಯಾಲಯದ ಸ್ವರೂಪಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆ ತಾರದೇ ಬೆಳೆಸಬೇಕು‘ ಎಂದು ಸಲಹೆ ನೀಡಿದರು.</p>.<p>’ಬಹುಪಾಲು ವಿಶ್ವವಿದ್ಯಾಲಯಗಳು ಇಂದು ವಿಶ್ವಾಸಾರ್ಹತೆಯ ಕೊರತೆ ಎದುರಿಸುತ್ತಿವೆ. ಕಾಲೇಜು ರೀತಿಯಲ್ಲಿ ಈ ವಿಶ್ವವಿದ್ಯಾಲಯಗಳು ನಡೆಯುತ್ತಿದ್ದು, ಗುಣಮಟ್ಟ ಕ್ಷೀಣಿಸುತ್ತಿದೆ. ಈಗಿರುವ ವಿಶ್ವವಿದ್ಯಾಲಯಗಳಿಗೆ ಸೌಲಭ್ಯಗಳನ್ನು ಕಲ್ಪಿಸಿ ಉತ್ತಮ ಶೈಕ್ಷಣಿಕ ವಾತಾವರಣ ಸೃಷ್ಟಿಸಬೇಕಾಗಿದೆ. ವಿಶ್ವವಿದ್ಯಾಲಯಗಳ ಸಂಖ್ಯೆ ಮುಖ್ಯವಲ್ಲ. ಸತ್ವ ಮುಖ್ಯ. ಎಂತಹ ಶಿಕ್ಷಣ ನೀಡುತ್ತವೆ ಎನ್ನುವುದು ಮುಖ್ಯ. ಈ ವಿಷಯದಲ್ಲಿ ವಿಶ್ವವಿದ್ಯಾಲಯಗಳ ಜತೆಗೆ ಸರ್ಕಾರವೂ ಜವಾಬ್ದಾರಿಯಾಗಬೇಕು‘ ಎಂದರು.</p>.<p>’ಕನ್ನಡ ವಿಶ್ವವಿದ್ಯಾಲಯ ಕೇವಲ ಸಂಶೋಧನೆಗೆ ಮೀಸಲಾಗಿದೆ ಎನ್ನುವ ತಪ್ಪು ಕಲ್ಪನೆ ಇದೆ. ಸಂಶೋಧನೆ ಪ್ರಧಾನವಾದ ವಿಶ್ವವಿದ್ಯಾಲಯ ಎನ್ನುವುದು ನಿಜ. ಆದರೆ, ಇಲ್ಲಿ ಸಂಶೋಧನೆಯ ಜತೆಗೆ ಬೋಧನೆಯನ್ನು ಒಳಗೊಂಡಿದೆ‘ ಎಂದು ವಿವರಿಸಿದರು.</p>.<p>’ಕನ್ನಡ ವಿಶ್ವವಿದ್ಯಾಲಯಕ್ಕೆ ಸರ್ಕಾರ ಸಕಾಲಕ್ಕೆ ಅನುದಾನ ನೀಡುತ್ತಿಲ್ಲ. ಸರ್ಕಾರವೇ ಆರ್ಥಿಕವಾಗಿ ಪೋಷಿಸದಿದ್ದರೆ ಹೇಗೆ? ಮುಖ್ಯಮಂತ್ರಿ ಅವರು ಈ ಬಗ್ಗೆ ಗಮನಹರಿಸಬೇಕು. ಮುಂಬರುವ ಬಜೆಟ್ನಲ್ಲಾದರೂ ವಿಶ್ವವಿದ್ಯಾಲಯಕ್ಕೆ ಆರ್ಥಿಕ ಬಲ ತುಂಬಬೇಕು‘ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕನ್ನಡ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸುವ ಪ್ರಯತ್ನಗಳ ಮೂಲಕ ಸಂಸ್ಥೆಯ ಚೈತನ್ಯವನ್ನು ಕುಂದಿಸಲಾಗುತ್ತಿದೆ’ ಎಂದು ಚಿಂತಕ ಬಂಜಗೆರೆ ಜಯಪ್ರಕಾಶ್ ಹೇಳಿದರು.</p>.<p>ಬಂಡಾಯ ಸಾಹಿತ್ಯ ಸಂಘಟನೆ ಭಾನುವಾರ ‘ಕನ್ನಡ ವಿಶ್ವವಿದ್ಯಾಲಯದ ಸ್ಥಿತಿ–ಗತಿ‘ ಕುರಿತು ಆಯೋಜಿಸಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ’ಕನ್ನಡ ವಿಶ್ವವಿದ್ಯಾಲಯಕ್ಕೆ ಸಿಂಡಿಕೇಟ್ ಸದಸ್ಯರ ನೇಮಕ, ಕ್ರಿಯಾ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ವಿಶ್ಲೇಷಿಸಿದಾಗ ಬಲಪಂಥೀಯರು ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸಲು ನಡೆಸುತ್ತಿರುವ ಪ್ರಯತ್ನಗಳು ತಿಳಿಯುತ್ತವೆ‘ ಎಂದರು.</p>.<p>’ಕನ್ನಡದ ಅರಿವು ವಿಸ್ತರಿಸುವ ಜತೆ ಹಿರಿಮೆ ಹೆಚ್ಚಿಸಿದ ವಿಶ್ವವಿದ್ಯಾಲಯದಲ್ಲಿ ಈಗ ಮುಕ್ತ ಚಿಂತನೆಗಳಿಗೆ ಅವಕಾಶಗಳು ಇಲ್ಲದಂತಹ ವಾತಾವರಣ ಸೃಷ್ಟಿಯಾಗುತ್ತಿದೆ‘ ಎಂದರು.</p>.<p>’ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವೂ ನೀಡುತ್ತಿಲ್ಲ. ಸಂಸ್ಕೃತ ವಿಶ್ವವಿದ್ಯಾಲ<br />ಯಕ್ಕೆ ಸಾಕಷ್ಟು ಅನುದಾನ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕನ್ನಡದ ಭಾಷೆಗಾಗಿಯೇ ಮೀಸಲಾಗಿರುವ ಏಕೈಕ ವಿಶ್ವವಿದ್ಯಾಲಯಕ್ಕೆ ಅನುದಾನ ನೀಡಲು ಹಿಂದೇಟು ಹಾಕುತ್ತಿದೆ‘ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಮಾತನಾಡಿ, ’ಕನ್ನಡ ವಿಶ್ವ ವಿದ್ಯಾಲಯದ ಬಗ್ಗೆ ಚರ್ಚಿಸುವ ಪರಿಸ್ಥಿತಿ ಬಂದಿರುವುದೇ ವಿಪರ್ಯಾಸ. ಕನ್ನಡ ವಿಶ್ವವಿದ್ಯಾಲಯದ ಸ್ವರೂಪಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆ ತಾರದೇ ಬೆಳೆಸಬೇಕು‘ ಎಂದು ಸಲಹೆ ನೀಡಿದರು.</p>.<p>’ಬಹುಪಾಲು ವಿಶ್ವವಿದ್ಯಾಲಯಗಳು ಇಂದು ವಿಶ್ವಾಸಾರ್ಹತೆಯ ಕೊರತೆ ಎದುರಿಸುತ್ತಿವೆ. ಕಾಲೇಜು ರೀತಿಯಲ್ಲಿ ಈ ವಿಶ್ವವಿದ್ಯಾಲಯಗಳು ನಡೆಯುತ್ತಿದ್ದು, ಗುಣಮಟ್ಟ ಕ್ಷೀಣಿಸುತ್ತಿದೆ. ಈಗಿರುವ ವಿಶ್ವವಿದ್ಯಾಲಯಗಳಿಗೆ ಸೌಲಭ್ಯಗಳನ್ನು ಕಲ್ಪಿಸಿ ಉತ್ತಮ ಶೈಕ್ಷಣಿಕ ವಾತಾವರಣ ಸೃಷ್ಟಿಸಬೇಕಾಗಿದೆ. ವಿಶ್ವವಿದ್ಯಾಲಯಗಳ ಸಂಖ್ಯೆ ಮುಖ್ಯವಲ್ಲ. ಸತ್ವ ಮುಖ್ಯ. ಎಂತಹ ಶಿಕ್ಷಣ ನೀಡುತ್ತವೆ ಎನ್ನುವುದು ಮುಖ್ಯ. ಈ ವಿಷಯದಲ್ಲಿ ವಿಶ್ವವಿದ್ಯಾಲಯಗಳ ಜತೆಗೆ ಸರ್ಕಾರವೂ ಜವಾಬ್ದಾರಿಯಾಗಬೇಕು‘ ಎಂದರು.</p>.<p>’ಕನ್ನಡ ವಿಶ್ವವಿದ್ಯಾಲಯ ಕೇವಲ ಸಂಶೋಧನೆಗೆ ಮೀಸಲಾಗಿದೆ ಎನ್ನುವ ತಪ್ಪು ಕಲ್ಪನೆ ಇದೆ. ಸಂಶೋಧನೆ ಪ್ರಧಾನವಾದ ವಿಶ್ವವಿದ್ಯಾಲಯ ಎನ್ನುವುದು ನಿಜ. ಆದರೆ, ಇಲ್ಲಿ ಸಂಶೋಧನೆಯ ಜತೆಗೆ ಬೋಧನೆಯನ್ನು ಒಳಗೊಂಡಿದೆ‘ ಎಂದು ವಿವರಿಸಿದರು.</p>.<p>’ಕನ್ನಡ ವಿಶ್ವವಿದ್ಯಾಲಯಕ್ಕೆ ಸರ್ಕಾರ ಸಕಾಲಕ್ಕೆ ಅನುದಾನ ನೀಡುತ್ತಿಲ್ಲ. ಸರ್ಕಾರವೇ ಆರ್ಥಿಕವಾಗಿ ಪೋಷಿಸದಿದ್ದರೆ ಹೇಗೆ? ಮುಖ್ಯಮಂತ್ರಿ ಅವರು ಈ ಬಗ್ಗೆ ಗಮನಹರಿಸಬೇಕು. ಮುಂಬರುವ ಬಜೆಟ್ನಲ್ಲಾದರೂ ವಿಶ್ವವಿದ್ಯಾಲಯಕ್ಕೆ ಆರ್ಥಿಕ ಬಲ ತುಂಬಬೇಕು‘ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>