<p><strong>ಬೆಂಗಳೂರು</strong>: ಕಾರಿನಲ್ಲಿ ತೆರಳುತ್ತಿದ್ದ ದಂಪತಿ ಅಡ್ಟಗಟ್ಟಿ ಗಲಾಟೆ ಮಾಡಿ, ಹಲ್ಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ನವೀನ್ ರೆಡ್ಡಿ (30) ಎಂಬಾತನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.</p>.<p>ಸರ್ಜಾಪುರ ಮುಖ್ಯರಸ್ತೆಯಲ್ಲಿ ಜಿತಿನ್ ರಾಜ್ ಎಂಬುವವರು ಪತ್ನಿ ಹಾಗೂ ಮಕ್ಕಳ ಜತೆ ಸೋಮವಾರ ರಾತ್ರಿ ಕಾರಿನಲ್ಲಿ ಇಂದಿರಾನಗರದ ತಮ್ಮ ಸ್ನೇಹಿತನ ಮನೆಗೆ ಹೋಗುತ್ತಿದ್ದರು. ವಾಹನ ಹಿಂದಿಕ್ಕುವ ವಿಚಾರಕ್ಕೆ ಈ ಜಗಳ ನಡೆದಿದೆ. </p>.<p>ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಕಾರು ಅಡ್ಡಗಟ್ಟಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕಾರಿನ ವೈಪರ್ ಕಿತ್ತು ಹಾಕಿ, ಗಾಜು ಒಡೆದು ಹಾಕಿದ್ದಾರೆ. ಕಾರಿನಲ್ಲಿ ಮಗು ಇದೆ ಎಂದು ಹೇಳಿದರೂ ಆತ ಗಲಾಟೆ ಮುಂದುವರೆಸಿದ್ದಾನೆ. ಈ ದೃಶ್ಯವನ್ನು ಅವರು ಮೊಬೈಲ್ನಲ್ಲಿ ಸೆರೆ ಹಿಡಿದು, ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು, ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ಟ್ಯಾಗ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾರಿನಲ್ಲಿ ತೆರಳುತ್ತಿದ್ದ ದಂಪತಿ ಅಡ್ಟಗಟ್ಟಿ ಗಲಾಟೆ ಮಾಡಿ, ಹಲ್ಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ನವೀನ್ ರೆಡ್ಡಿ (30) ಎಂಬಾತನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.</p>.<p>ಸರ್ಜಾಪುರ ಮುಖ್ಯರಸ್ತೆಯಲ್ಲಿ ಜಿತಿನ್ ರಾಜ್ ಎಂಬುವವರು ಪತ್ನಿ ಹಾಗೂ ಮಕ್ಕಳ ಜತೆ ಸೋಮವಾರ ರಾತ್ರಿ ಕಾರಿನಲ್ಲಿ ಇಂದಿರಾನಗರದ ತಮ್ಮ ಸ್ನೇಹಿತನ ಮನೆಗೆ ಹೋಗುತ್ತಿದ್ದರು. ವಾಹನ ಹಿಂದಿಕ್ಕುವ ವಿಚಾರಕ್ಕೆ ಈ ಜಗಳ ನಡೆದಿದೆ. </p>.<p>ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಕಾರು ಅಡ್ಡಗಟ್ಟಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕಾರಿನ ವೈಪರ್ ಕಿತ್ತು ಹಾಕಿ, ಗಾಜು ಒಡೆದು ಹಾಕಿದ್ದಾರೆ. ಕಾರಿನಲ್ಲಿ ಮಗು ಇದೆ ಎಂದು ಹೇಳಿದರೂ ಆತ ಗಲಾಟೆ ಮುಂದುವರೆಸಿದ್ದಾನೆ. ಈ ದೃಶ್ಯವನ್ನು ಅವರು ಮೊಬೈಲ್ನಲ್ಲಿ ಸೆರೆ ಹಿಡಿದು, ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು, ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ಟ್ಯಾಗ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>