<p><strong>ಬೆಂಗಳೂರು:</strong> ಮದ್ಯದ ಅಮಲಿನಲ್ಲಿ ನಡೆದ ಜಗಳದಲ್ಲಿ ಗಾಯಗೊಂಡಿದ್ದ ಆಟೊ ಚಾಲಕ ಮೃತಪಟ್ಟಿರುವ ಘಟನೆ ರಾಜಗೋಪಾಲನಗರದ ಬಳಿ ನಡೆದಿದೆ.</p>.<p>ಬಸವನಕಟ್ಟೆ ನಿವಾಸಿ ಆಟೊ ಚಾಲಕ ರಂಗಸ್ವಾಮಿ (51) ಮೃತರು. ಆರೋಪಿ ವಿನಯ್ ಕುಮಾರ್ (24) ಎಂಬಾತನನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ರಂಗಸ್ವಾಮಿ ಹಾಗೂ ವಿನಯ್ ಕುಮಾರ್ ವೃತ್ತಿಯಲ್ಲಿ ಆಟೊ ಚಾಲಕರು. ಒಂದೇ ಬಡಾವಣೆಯ ನಿವಾಸಿಗಳು. ಮೇ 18ರ ರಾತ್ರಿ ಬಸವನಕಟ್ಟೆಯ ಬಾರ್ ಬಳಿ ರಂಗಸ್ವಾಮಿ ಕುಡಿದು ರಂಪಾಟ ಮಾಡುತ್ತಾ ಅಕ್ಕಪಕ್ಕದ ಮನೆಯವರನ್ನು ನಿಂದಿಸುತ್ತಿದ್ದರು. ಇದನ್ನು ವಿನಯ್ ಪ್ರಶ್ನಿಸಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ, ನೂಕಾಟ ಸಂಭವಿಸಿದಾಗ ರಂಗಸ್ವಾಮಿ ಕೆಳಗೆ ಬಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ಕೆಳಗೆ ಬಿದ್ದ ಗಾಯಗೊಂಡಿದ್ದ ರಂಗಸ್ವಾಮಿ ತಲೆಗೆ ಗಂಭೀರ ಪೆಟ್ಟಾಗಿತ್ತು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಆರೋಪಿಯನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮದ್ಯದ ಅಮಲಿನಲ್ಲಿ ನಡೆದ ಜಗಳದಲ್ಲಿ ಗಾಯಗೊಂಡಿದ್ದ ಆಟೊ ಚಾಲಕ ಮೃತಪಟ್ಟಿರುವ ಘಟನೆ ರಾಜಗೋಪಾಲನಗರದ ಬಳಿ ನಡೆದಿದೆ.</p>.<p>ಬಸವನಕಟ್ಟೆ ನಿವಾಸಿ ಆಟೊ ಚಾಲಕ ರಂಗಸ್ವಾಮಿ (51) ಮೃತರು. ಆರೋಪಿ ವಿನಯ್ ಕುಮಾರ್ (24) ಎಂಬಾತನನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ರಂಗಸ್ವಾಮಿ ಹಾಗೂ ವಿನಯ್ ಕುಮಾರ್ ವೃತ್ತಿಯಲ್ಲಿ ಆಟೊ ಚಾಲಕರು. ಒಂದೇ ಬಡಾವಣೆಯ ನಿವಾಸಿಗಳು. ಮೇ 18ರ ರಾತ್ರಿ ಬಸವನಕಟ್ಟೆಯ ಬಾರ್ ಬಳಿ ರಂಗಸ್ವಾಮಿ ಕುಡಿದು ರಂಪಾಟ ಮಾಡುತ್ತಾ ಅಕ್ಕಪಕ್ಕದ ಮನೆಯವರನ್ನು ನಿಂದಿಸುತ್ತಿದ್ದರು. ಇದನ್ನು ವಿನಯ್ ಪ್ರಶ್ನಿಸಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ, ನೂಕಾಟ ಸಂಭವಿಸಿದಾಗ ರಂಗಸ್ವಾಮಿ ಕೆಳಗೆ ಬಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ಕೆಳಗೆ ಬಿದ್ದ ಗಾಯಗೊಂಡಿದ್ದ ರಂಗಸ್ವಾಮಿ ತಲೆಗೆ ಗಂಭೀರ ಪೆಟ್ಟಾಗಿತ್ತು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಆರೋಪಿಯನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>