ಬುಧವಾರ ಬೆಳಿಗ್ಗೆ 10.15ರ ಸುಮಾರಿಗೆ ಶ್ರೀನಿವಾಸನಗರ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರು ಮಾರಣಾಂತಿಕ ಹಲ್ಲೆಗೊಳಗಾಗಿ ಬಿದ್ದಿದ್ದರು. ಸಮೀಪ ಮಚ್ಚು ಕೂಡ ಬಿದ್ದಿತ್ತು. ರಕ್ತದ ಮಡುವಿನಲ್ಲಿ ಮಹಿಳೆ ಒದ್ದಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು, ಮಹಿಳೆ
ಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಬಳಿಕ ಆಕೆ ಗೀತಾ ಎಂಬುದು ಗೊತ್ತಾಗಿದೆ.