‘ಮುನಿಕೃಷ್ಣ ಅವರಿಗೆ ಚಪ್ಪಲಿಯಿಂದ ಹೊಡೆಯಲು ಗೋಪಿ ಮುಂದಾಗಿದ್ದರು. ಅದನ್ನು ತಡೆದಿದ್ದ ಸ್ನೇಹಿತ, ಗೋಪಿಯನ್ನು ಕರೆದುಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ. ಆರೋಪಿ, ಕಾರಿನಲ್ಲಿ ಹಿಂಬಾಲಿಸಿದ್ದ. ಮಾರ್ಗಮಧ್ಯೆ ಗೋಪಿಗೆ ಕಾರು ಗುದ್ದಿಸಿದ್ದ. ತೀವ್ರ ಗಾಯಗೊಂಡು ಗೋಪಿ ಮೃತಪಡುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಸ್ನೇಹಿತ ಸಹ ಓಡಿ ಹೋಗಿದ್ದ’ ಎಂದರು.