<p><strong>ಬೆಂಗಳೂರು:</strong> ಆಟೊ ಚಾಲಕನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಒಡಿಶಾದ ಮೂವರು ಆರೋಪಿಗಳನ್ನು ಕೆ.ಪಿ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಸೌರಭ್ ಬಿಸ್ವಾಲ್ (25), ಸಾಗರ್ ದಾಸ್ (24), ಸುಬ್ರಕಾಂತ್ ಭುವಿಯಾ (35) ಬಂಧಿತರು. ಕೆ.ಪಿ.ಅಗ್ರಹಾರದ ನಿವಾಸಿ ಆಟೊ ಚಾಲಕ ರೇಚಣ್ಣ (36) ಅವರನ್ನು ಮೂವರು ಆರೋಪಿಗಳು ಕೊಲೆ ಮಾಡಿ ಪರಾರಿ ಆಗಿದ್ದರು. ಓಡಿಶಾದ ಮೂವರು ಆರೋಪಿಗಳು ಕೆ.ಪಿ.ಅಗ್ರಹಾರದಲ್ಲಿ ನೆಲಸಿದ್ದರು.</p>.<p>ಆರೋಪಿಗಳು ಹಾಗೂ ಆಟೊ ಚಾಲಕ ರೇಚಣ್ಣ ಅವರ ಮನೆ ಅಕ್ಕಪಕ್ಕದಲ್ಲಿದ್ದವು. ಡಿ.31ರಂದು ರಾತ್ರಿ 11.30ರ ಸುಮಾರಿಗೆ ಮದ್ಯಪಾನ ಮಾಡಿದ್ದ ಆರೋಪಿಗಳು ರೇಚಣ್ಣ ಮನೆಯ ಬಾಗಿಲನ್ನು ತಟ್ಟಿದ್ದರು. ಆ ವೇಳೆ ರೇಚಣ್ಣ ಆಕ್ರೋಶಗೊಂಡು ಆರೋಪಿಗಳ ಜೊತೆಗೆ ಜಗಳ ತೆಗೆದಿದ್ದರು. ಜಗಳ ತಾರಕಕ್ಕೇರಿದಾಗ ಆರೋಪಿಗಳು ಚಾಕುವಿನಿಂದ ರೇಚಣ್ಣನ ಎದೆ, ಬೆನ್ನಿಗೆ ಇರಿದಿದ್ದರು. ಪರಿಣಾಮ ಗಂಭೀರವಾಗಿ ಗಾಯಗೊಂಡ ರೇಚಣ್ಣ, ಸ್ಥಳದಲ್ಲೇ ಮೃತಪಟ್ಟಿದ್ದರು. ವಿಚಾರ ತಿಳಿದ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ರೇಚಣ್ಣ ತಾಯಿ ಜೊತೆಗೆ ಕೆ.ಪಿ ಅಗ್ರಹಾರದಲ್ಲಿ ನೆಲಸಿದ್ದರು. ಆಟೊ ಚಲಾಯಿಸಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಟೊ ಚಾಲಕನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಒಡಿಶಾದ ಮೂವರು ಆರೋಪಿಗಳನ್ನು ಕೆ.ಪಿ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಸೌರಭ್ ಬಿಸ್ವಾಲ್ (25), ಸಾಗರ್ ದಾಸ್ (24), ಸುಬ್ರಕಾಂತ್ ಭುವಿಯಾ (35) ಬಂಧಿತರು. ಕೆ.ಪಿ.ಅಗ್ರಹಾರದ ನಿವಾಸಿ ಆಟೊ ಚಾಲಕ ರೇಚಣ್ಣ (36) ಅವರನ್ನು ಮೂವರು ಆರೋಪಿಗಳು ಕೊಲೆ ಮಾಡಿ ಪರಾರಿ ಆಗಿದ್ದರು. ಓಡಿಶಾದ ಮೂವರು ಆರೋಪಿಗಳು ಕೆ.ಪಿ.ಅಗ್ರಹಾರದಲ್ಲಿ ನೆಲಸಿದ್ದರು.</p>.<p>ಆರೋಪಿಗಳು ಹಾಗೂ ಆಟೊ ಚಾಲಕ ರೇಚಣ್ಣ ಅವರ ಮನೆ ಅಕ್ಕಪಕ್ಕದಲ್ಲಿದ್ದವು. ಡಿ.31ರಂದು ರಾತ್ರಿ 11.30ರ ಸುಮಾರಿಗೆ ಮದ್ಯಪಾನ ಮಾಡಿದ್ದ ಆರೋಪಿಗಳು ರೇಚಣ್ಣ ಮನೆಯ ಬಾಗಿಲನ್ನು ತಟ್ಟಿದ್ದರು. ಆ ವೇಳೆ ರೇಚಣ್ಣ ಆಕ್ರೋಶಗೊಂಡು ಆರೋಪಿಗಳ ಜೊತೆಗೆ ಜಗಳ ತೆಗೆದಿದ್ದರು. ಜಗಳ ತಾರಕಕ್ಕೇರಿದಾಗ ಆರೋಪಿಗಳು ಚಾಕುವಿನಿಂದ ರೇಚಣ್ಣನ ಎದೆ, ಬೆನ್ನಿಗೆ ಇರಿದಿದ್ದರು. ಪರಿಣಾಮ ಗಂಭೀರವಾಗಿ ಗಾಯಗೊಂಡ ರೇಚಣ್ಣ, ಸ್ಥಳದಲ್ಲೇ ಮೃತಪಟ್ಟಿದ್ದರು. ವಿಚಾರ ತಿಳಿದ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ರೇಚಣ್ಣ ತಾಯಿ ಜೊತೆಗೆ ಕೆ.ಪಿ ಅಗ್ರಹಾರದಲ್ಲಿ ನೆಲಸಿದ್ದರು. ಆಟೊ ಚಲಾಯಿಸಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>