<p><strong>ಬೆಂಗಳೂರು</strong>: ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಧಿಸಲಾಗುವ ದಂಡದ ಮೊತ್ತ ಹೆಚ್ಚಳ ಮಾಡಿರುವುದನ್ನು ಖಂಡಿಸಿ ‘ಆಟೋರಿಕ್ಷಾ ಡ್ರೈವರ್ ಯೂನಿಯನ್’ ನೇತೃತ್ವದಲ್ಲಿ ಆಟೊ ಚಾಲಕರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಪುರಭವನ ಎದುರು ಸೇರಿದ್ದ ಚಾಲಕರು, ‘ದಂಡ ಹೆಚ್ಚಳ ನಿರ್ಧಾರವು ಜನವಿರೋಧಿಯಾಗಿದೆ. ಸಾರಿಗೆ ಇಲಾಖೆಯು ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>‘ಓಲಾ, ಉಬರ್ ಸೇರಿದಂತೆ ಮೊಬೈಲ್ ಆ್ಯಪ್ ಆಧರಿತ ಟ್ಯಾಕ್ಸಿ ಕಂಪನಿಗಳಿಂದಾಗಿಈಗಾಗಲೇ ಆಟೊ ಚಾಲಕರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ಸಂದರ್ಭದಲ್ಲೇ ದಂಡವನ್ನು ಶೇ 10ರಿಂದ ಶೇ 20ರಷ್ಟು ಹೆಚ್ಚಳ ಮಾಡಿರುವುದು ಚಾಲಕರನ್ನು ಮತ್ತಷ್ಟು ತೊಂದರೆಗೆ ಸಿಲುಕುವಂತೆ ಮಾಡಿದೆ’ ಎಂದು ದೂರಿದರು.</p>.<p>‘ಸಂಚಾರ ಪೊಲೀಸರಿಂದ ಕಿರುಕುಳ ಅನುಭವಿಸುವುದು ನಿತ್ಯದ ಗೋಳಾಗಿದೆ. ಎಲ್ಲೆಂದರಲ್ಲಿ ಫೋಟೊ ತೆಗೆದುಕೊಳ್ಳುವುದು, ಅಡ್ಡಗಟ್ಟಿ ಪ್ರಕರಣ ದಾಖಲಿಸಿಕೊಳ್ಳುವುದು, ದಂಡದ ನೆಪದಲ್ಲಿ ಅಕ್ರಮವಾಗಿ ಹಣ ಪಡೆಯುವುದು ಜಾಸ್ತಿ ಆಗಿದೆ. ಇದಕ್ಕೆ ಮೊದಲು ಕಡಿವಾಣ ಹಾಕಬೇಕು’ ಎಂದು ಚಾಲಕರು ಆಗ್ರಹಿಸಿದರು.</p>.<p>‘ನಗರದಲ್ಲಿ ಸಂಚಾರ ವ್ಯವಸ್ಥೆ ಶೋಚನೀಯ ಸ್ಥಿತಿಯಲ್ಲಿದೆ. ರಸ್ತೆ ಸುಧಾರಣೆ, ವಿಸ್ತರಣೆ, ವಾಹನಗಳ ತಂಗುದಾಣ ನಿರ್ಮಾಣದಂಥ ಯೋಜನೆಗಳನ್ನು ಸಮರ್ಪಕವಾಗಿ ರೂಪಿಸಿ ಜಾರಿಗೆ ತರಬೇಕಿದೆ. ಅದನ್ನು ಬಿಟ್ಟು ಸರ್ಕಾರದ ಖಜಾನೆ ತುಂಬಿಸಿಕೊಳ್ಳುವುದಕ್ಕಾಗಿ ದಂಡ ಏರಿಕೆ ಮಾಡಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಉದ್ಯೋಗ ಸಿಗದವರು ಆಟೊ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯದ ಸ್ಥಿತಿಯಲ್ಲಿ ದಿನಕ್ಕೆ ₹ 300 ಸಂಪಾದಿಸುವುದೂ ಕಷ್ಟವಾಗಿದೆ. ಮನುಷ್ಯ ತಪ್ಪು ಮಾಡುವುದು ಸಹಜ. ಅರಿವು ಇಲ್ಲದಂತೆ ಒಮ್ಮೊಮ್ಮೆ ಸಂಚಾರ ನಿಯಮ ಉಲ್ಲಂಘಿಸುತ್ತೇವೆ. ಪರಿಷ್ಕೃತ ದಂಡ ವಸೂಲಿ ಆರಂಭವಾದರೆ, ದುಡಿದ ಹಣವನ್ನೆಲ್ಲ ಪೊಲೀಸರಿಗೇ ನೀಡಬೇಕಾದ ಸ್ಥಿತಿ ಬರುತ್ತದೆ’ ಎಂದು ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಧಿಸಲಾಗುವ ದಂಡದ ಮೊತ್ತ ಹೆಚ್ಚಳ ಮಾಡಿರುವುದನ್ನು ಖಂಡಿಸಿ ‘ಆಟೋರಿಕ್ಷಾ ಡ್ರೈವರ್ ಯೂನಿಯನ್’ ನೇತೃತ್ವದಲ್ಲಿ ಆಟೊ ಚಾಲಕರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಪುರಭವನ ಎದುರು ಸೇರಿದ್ದ ಚಾಲಕರು, ‘ದಂಡ ಹೆಚ್ಚಳ ನಿರ್ಧಾರವು ಜನವಿರೋಧಿಯಾಗಿದೆ. ಸಾರಿಗೆ ಇಲಾಖೆಯು ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>‘ಓಲಾ, ಉಬರ್ ಸೇರಿದಂತೆ ಮೊಬೈಲ್ ಆ್ಯಪ್ ಆಧರಿತ ಟ್ಯಾಕ್ಸಿ ಕಂಪನಿಗಳಿಂದಾಗಿಈಗಾಗಲೇ ಆಟೊ ಚಾಲಕರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ಸಂದರ್ಭದಲ್ಲೇ ದಂಡವನ್ನು ಶೇ 10ರಿಂದ ಶೇ 20ರಷ್ಟು ಹೆಚ್ಚಳ ಮಾಡಿರುವುದು ಚಾಲಕರನ್ನು ಮತ್ತಷ್ಟು ತೊಂದರೆಗೆ ಸಿಲುಕುವಂತೆ ಮಾಡಿದೆ’ ಎಂದು ದೂರಿದರು.</p>.<p>‘ಸಂಚಾರ ಪೊಲೀಸರಿಂದ ಕಿರುಕುಳ ಅನುಭವಿಸುವುದು ನಿತ್ಯದ ಗೋಳಾಗಿದೆ. ಎಲ್ಲೆಂದರಲ್ಲಿ ಫೋಟೊ ತೆಗೆದುಕೊಳ್ಳುವುದು, ಅಡ್ಡಗಟ್ಟಿ ಪ್ರಕರಣ ದಾಖಲಿಸಿಕೊಳ್ಳುವುದು, ದಂಡದ ನೆಪದಲ್ಲಿ ಅಕ್ರಮವಾಗಿ ಹಣ ಪಡೆಯುವುದು ಜಾಸ್ತಿ ಆಗಿದೆ. ಇದಕ್ಕೆ ಮೊದಲು ಕಡಿವಾಣ ಹಾಕಬೇಕು’ ಎಂದು ಚಾಲಕರು ಆಗ್ರಹಿಸಿದರು.</p>.<p>‘ನಗರದಲ್ಲಿ ಸಂಚಾರ ವ್ಯವಸ್ಥೆ ಶೋಚನೀಯ ಸ್ಥಿತಿಯಲ್ಲಿದೆ. ರಸ್ತೆ ಸುಧಾರಣೆ, ವಿಸ್ತರಣೆ, ವಾಹನಗಳ ತಂಗುದಾಣ ನಿರ್ಮಾಣದಂಥ ಯೋಜನೆಗಳನ್ನು ಸಮರ್ಪಕವಾಗಿ ರೂಪಿಸಿ ಜಾರಿಗೆ ತರಬೇಕಿದೆ. ಅದನ್ನು ಬಿಟ್ಟು ಸರ್ಕಾರದ ಖಜಾನೆ ತುಂಬಿಸಿಕೊಳ್ಳುವುದಕ್ಕಾಗಿ ದಂಡ ಏರಿಕೆ ಮಾಡಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಉದ್ಯೋಗ ಸಿಗದವರು ಆಟೊ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯದ ಸ್ಥಿತಿಯಲ್ಲಿ ದಿನಕ್ಕೆ ₹ 300 ಸಂಪಾದಿಸುವುದೂ ಕಷ್ಟವಾಗಿದೆ. ಮನುಷ್ಯ ತಪ್ಪು ಮಾಡುವುದು ಸಹಜ. ಅರಿವು ಇಲ್ಲದಂತೆ ಒಮ್ಮೊಮ್ಮೆ ಸಂಚಾರ ನಿಯಮ ಉಲ್ಲಂಘಿಸುತ್ತೇವೆ. ಪರಿಷ್ಕೃತ ದಂಡ ವಸೂಲಿ ಆರಂಭವಾದರೆ, ದುಡಿದ ಹಣವನ್ನೆಲ್ಲ ಪೊಲೀಸರಿಗೇ ನೀಡಬೇಕಾದ ಸ್ಥಿತಿ ಬರುತ್ತದೆ’ ಎಂದು ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>