ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಕೊಲೆ: ಆಟೊ ಚಾಲಕ ಬಂಧನ

80 ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದ್ದ ಪೊಲೀಸರು
Last Updated 18 ಆಗಸ್ಟ್ 2022, 22:06 IST
ಅಕ್ಷರ ಗಾತ್ರ

ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯ ಕೆರೆ ದಡದಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು, ಆರೋಪಿ ಇಮ್ರಾನ್ (28) ಎಂಬುವರನ್ನು ಬಂಧಿಸಿದ್ದಾರೆ.

‘ಅಂಜನಾಪುರದ ನಿವಾಸಿ ಇಮ್ರಾನ್ ಆಟೊ ಚಾಲಕ. ಆ. 10ರಂದು ರಾತ್ರಿ ಮಹಿಳೆಯನ್ನು ಕೊಂದು ಪರಾರಿಯಾಗಿದ್ದ. 80 ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ ಆರೋಪಿ ಬಂಧಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಜೆ.ಪಿ. ನಗರದ ಮಾರೇನಹಳ್ಳಿ ಬಳಿ ನಿಂತಿದ್ದ ಮಹಿಳೆಯನ್ನು ಮಾತನಾಡಿಸಿದ್ದ ಆರೋಪಿ, ಪುಸಲಾಯಿಸಿ ಆಟೊದಲ್ಲಿ ಕೆರೆ ಬಳಿ ಕರೆದೊಯ್ದಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮಹಿಳೆ ಬಳಿ ಹೆಚ್ಚು ಹಣವಿರುವುದನ್ನು ದೋಚಬೇಕೆಂದು ಸಂಚು ರೂಪಿಸಿದ್ದ. ನಿರ್ಜನ ಪ್ರದೇಶಕ್ಕೆ ಕರೆ ದೊಯ್ದು ದೈಹಿಕ ಸಂಪರ್ಕ ಹೊಂದಿದ್ದ. ಅದಾದ ನಂತರ ಹಣ ನೀಡುವಂತೆ ಒತ್ತಾಯಿಸಿದ್ದ. ಮಹಿಳೆ ಒಪ್ಪಿರಲಿಲ್ಲ. ಸಿಟ್ಟಾದ ಆರೋಪಿ, ಮಹಿಳೆಯ ತಲೆ ಹಾಗೂ ಎದೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದು ಪರಾರಿಯಾಗಿದ್ದ’ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT