<p><strong>ಕೆ.ಆರ್.ಪುರ:</strong> ‘ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಅನ್ನು ಬಳಸದಂತೆ ನಾವೆಲ್ಲ ಸಂಕಲ್ಪ ಮಾಡೋಣ’ ಎಂದು ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಹದೇವಪುರ ವಿಭಾಗದ ಪರಿಸರ ಅಧಿಕಾರಿ ಡಾ.ಕೆ.ಎಂ.ರಾಜು ತಿಳಿಸಿದರು. </p><p>ಗರುಡಾಚಾರ್ ಪಾಳ್ಯದಲ್ಲಿ ಆಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ಸೈಕ್ಲೋಥಾನ್ ಹಾಗೂ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p><p>ಮಿಡಿತ ಫೌಂಡೇಶನ್ ಅಧ್ಯಕ್ಷ ಪರಿಸರ ಮಂಜು ಮಾತನಾಡಿ, ‘ನಾವು ಪರಿಸರವನ್ನು ಎಷ್ಟು ಸ್ವಚ್ಛವಾಗಿಟ್ಟು ಕೊಳ್ಳುತ್ತೇವೋ, ಅದು ಮುಂದಿನ ಪೀಳಿಗೆಗೆ ಸಹಕಾರಿಯಾಗುತ್ತದೆ’ ಎಂದು ಹೇಳಿದರು.</p><p>ಕಾಲ್ನಡಿಗೆ ಜಾಥಾದಲ್ಲಿ ದೊರೆತ ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಲಾಯಿತು. ಮಹದೇವಪುರ ಡೆಕಥ್ಲಾನ್ನಿಂದ ಕಾಡುಗೋಡಿ ಟ್ರೀ ಪಾರ್ಕ್ವರೆಗೂ<br>ಸ್ವಯಂಪ್ರೇರಿತರಾಗಿ ಸುಮಾರು 200ಕ್ಕೂ ಹೆಚ್ಚು ಪರಿಸರ ಪ್ರೇಮಿಗಳು ಸೈಕಲ್ ಜಾಥಾದಲ್ಲಿ ಭಾಗಿಯಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಅನ್ನು ಬಳಸದಂತೆ ನಾವೆಲ್ಲ ಸಂಕಲ್ಪ ಮಾಡೋಣ’ ಎಂದು ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಹದೇವಪುರ ವಿಭಾಗದ ಪರಿಸರ ಅಧಿಕಾರಿ ಡಾ.ಕೆ.ಎಂ.ರಾಜು ತಿಳಿಸಿದರು. </p><p>ಗರುಡಾಚಾರ್ ಪಾಳ್ಯದಲ್ಲಿ ಆಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ಸೈಕ್ಲೋಥಾನ್ ಹಾಗೂ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p><p>ಮಿಡಿತ ಫೌಂಡೇಶನ್ ಅಧ್ಯಕ್ಷ ಪರಿಸರ ಮಂಜು ಮಾತನಾಡಿ, ‘ನಾವು ಪರಿಸರವನ್ನು ಎಷ್ಟು ಸ್ವಚ್ಛವಾಗಿಟ್ಟು ಕೊಳ್ಳುತ್ತೇವೋ, ಅದು ಮುಂದಿನ ಪೀಳಿಗೆಗೆ ಸಹಕಾರಿಯಾಗುತ್ತದೆ’ ಎಂದು ಹೇಳಿದರು.</p><p>ಕಾಲ್ನಡಿಗೆ ಜಾಥಾದಲ್ಲಿ ದೊರೆತ ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಲಾಯಿತು. ಮಹದೇವಪುರ ಡೆಕಥ್ಲಾನ್ನಿಂದ ಕಾಡುಗೋಡಿ ಟ್ರೀ ಪಾರ್ಕ್ವರೆಗೂ<br>ಸ್ವಯಂಪ್ರೇರಿತರಾಗಿ ಸುಮಾರು 200ಕ್ಕೂ ಹೆಚ್ಚು ಪರಿಸರ ಪ್ರೇಮಿಗಳು ಸೈಕಲ್ ಜಾಥಾದಲ್ಲಿ ಭಾಗಿಯಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>