ಬೆಂಗಳೂರು: ಎಚ್.ಎಸ್.ಅನುಪಮಾ, ಬಸವರಾಜ ಸಬರದ ಹಾಗೂ ಮಂಜುನಾಥ್ ಚಾಂದ್ ಅವರು ಡಾ.ಬರಗೂರು ಪ್ರತಿಷ್ಠಾನ ನೀಡುವ 2020ನೇ ಸಾಲಿನ ರಾಜಲಕ್ಷ್ಮಿ ಬರಗೂರು ಪುಸ್ತಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
‘ಅನುಪಮಾ ಅವರ ‘ಹೆಣ್ಣು ಹೆಜ್ಜೆ’ (ವಿಚಾರ ಸಾಹಿತ್ಯ), ಬಸವರಾಜ ಅವರ ‘ಬಯಲ ಬೆಳಕು’ (ವಿಮರ್ಶೆ) ಹಾಗೂ ಮಂಜುನಾಥ್ ಅವರ ‘ಕಾಡ ಸೆರಗಿನ ಸೂಡಿ’ (ಕಾದಂಬರಿ) ಕೃತಿಗಳು ಪ್ರಶಸ್ತಿಗೆ ಆಯ್ಕೆಯಾಗಿವೆ’ ಎಂದು ಪ್ರಕಟಣೆ ತಿಳಿಸಿದೆ. ಇದೇ 12ರಂದು ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪ್ರಶಸ್ತಿಯು ತಲಾ ₹10 ಸಾವಿರ ಮೊತ್ತ ಹಾಗೂ ಫಲಕವನ್ನು ಒಳಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.