ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ 2023ನೇ ಸಾಲಿನ ‘ಸೂ.ವೆಂ. ಆರಗ ವಿಮರ್ಶಾ ಪ್ರಶಸ್ತಿ’ಗೆ ಮೋಹನ ಕುಂಟಾರು, ‘ಡಾ. ವಿಜಯಾ ಸುಬ್ಬರಾಜ್ ಗಣ್ಯಲೇಖಕಿ ಪ್ರಶಸ್ತಿ’ಗೆ ಟಿ.ಎಸ್. ಶ್ರವಣಕುಮಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಟಿ.ಎಸ್. ಶ್ರವಣಕುಮಾರಿ
ಪ್ರಶಸ್ತಿಗಳು ತಲಾ ₹10 ಸಾವಿರ ನಗದು, ಸ್ಮರಣಿಕೆಗಳನ್ನು ಒಳಗೊಂಡಿವೆ. ಏ.13ರಂದು ನಡೆಯಲಿರುವ ಸಮಾರಂಭದಲ್ಲಿ ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ತಿಳಿಸಿದ್ದಾರೆ.