<p><strong>ಬೆಂಗಳೂರು</strong>: ಪಠ್ಯಕ್ಕೆ ಸೀಮಿತಗೊಳ್ಳದೇ ನೈಜ ಶಿಕ್ಷಣ ನೀಡುತ್ತಿರುವ ದೇಶದ ವಿವಿಧ ರಾಜ್ಯಗಳ ಅತ್ಯುತ್ತಮ ಶಿಕ್ಷಕರನ್ನು ‘ಶ್ರೀ ಶ್ರೀ ಶಿಕ್ಷಣ ಪ್ರಶಸ್ತಿ’ ಮೂಲಕ ಗುರುತಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ ತಿಳಿಸಿದರು.</p>.<p>ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಶನಿವಾರ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರ ಟ್ರಸ್ಟ್ ಹಮ್ಮಿಕೊಂಡಿದ್ದ ‘ಶ್ರೀ ಶ್ರೀ ಶಿಕ್ಷಣ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೆಲಸವೇ ಧ್ಯೇಯ ಎಂಬ ನಂಬಿಕೆಯಿಂದ ನಮ್ಮ ಟ್ರಸ್ಟಿಗಳು ಕೆಲಸ ಮಾಡುತ್ತಾರೆ. ದೇಶದ ಎಲ್ಲ ಶಾಲೆಗಳು ನಮ್ಮವೇ ಆಗಿದ್ದು, ಅವುಗಳ ಅಭಿವೃದ್ಧಿ ಮತ್ತು ಉತ್ಕೃಷ್ಟತೆಗಾಗಿ ಶ್ರಮಿಸುತ್ತೇವೆ’ ಎಂದು ಹೇಳಿದರು.</p>.<p>ಕೇಂದ್ರ ಶಿಕ್ಷಣ ಸಚಿವ ಸುಭಾಷ್ ಸರ್ಕಾರ್ ಮಾತನಾಡಿ, ‘ನಮ್ಮ ನಾಗರಿಕತೆಯು ನೀಡಿರುವ ಎಲ್ಲ ಕೊಡುಗೆಗಳ ಬಗ್ಗೆ ಗೌರವ ಇಟ್ಟುಕೊಳ್ಳಬೇಕು. ಪ್ರಾಚೀನ ವಿಜ್ಞಾನವಾದ ಯೋಗವನ್ನೂ ಹೆಮ್ಮೆಯ ಭಾವದಿಂದ ನೋಡಬೇಕು’ ಎಂದು ಸಲಹೆ ನೀಡಿದರು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಆರ್ಟ್ ಆಫ್ ಲಿವಿಂಗ್ ಸಮಗ್ರ ಶಿಕ್ಷಣವನ್ನು ಭಾರತದಾದ್ಯಂತ ನೀಡುತ್ತಿದ್ದು, 1200 ಉಚಿತ ಶಾಲೆಗಳನ್ನು ನಡೆಸುತ್ತಿದೆ. ಒಂದು ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಉಚಿತವಾಗಿ ಶಿಕ್ಷಣ ಪಡೆಯುತ್ತಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ತುಮಕೂರಿನ ಸರ್ಕಾರಿ ಸಂಯೋಜಿತ ಪ್ರೌಢಶಾಲೆಯ ಪ್ರಾಂಶುಪಾಲ ಎಸ್. ಕೃಷ್ಣಪ್ಪ, ಮಹಾರಾಷ್ಟ್ರದ ದತ್ತಾತ್ರೇಯ ವಾರೆ, ಗುರುಗ್ರಾಮದ ರಷ್ಮಿ ಶ್ರೀವಾಸ್ತವ್ ಸಹಿತ ಅನೇಕ ಸಾಧಕರಿಗೆ, ವಿವಿಧ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಠ್ಯಕ್ಕೆ ಸೀಮಿತಗೊಳ್ಳದೇ ನೈಜ ಶಿಕ್ಷಣ ನೀಡುತ್ತಿರುವ ದೇಶದ ವಿವಿಧ ರಾಜ್ಯಗಳ ಅತ್ಯುತ್ತಮ ಶಿಕ್ಷಕರನ್ನು ‘ಶ್ರೀ ಶ್ರೀ ಶಿಕ್ಷಣ ಪ್ರಶಸ್ತಿ’ ಮೂಲಕ ಗುರುತಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ ತಿಳಿಸಿದರು.</p>.<p>ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಶನಿವಾರ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರ ಟ್ರಸ್ಟ್ ಹಮ್ಮಿಕೊಂಡಿದ್ದ ‘ಶ್ರೀ ಶ್ರೀ ಶಿಕ್ಷಣ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೆಲಸವೇ ಧ್ಯೇಯ ಎಂಬ ನಂಬಿಕೆಯಿಂದ ನಮ್ಮ ಟ್ರಸ್ಟಿಗಳು ಕೆಲಸ ಮಾಡುತ್ತಾರೆ. ದೇಶದ ಎಲ್ಲ ಶಾಲೆಗಳು ನಮ್ಮವೇ ಆಗಿದ್ದು, ಅವುಗಳ ಅಭಿವೃದ್ಧಿ ಮತ್ತು ಉತ್ಕೃಷ್ಟತೆಗಾಗಿ ಶ್ರಮಿಸುತ್ತೇವೆ’ ಎಂದು ಹೇಳಿದರು.</p>.<p>ಕೇಂದ್ರ ಶಿಕ್ಷಣ ಸಚಿವ ಸುಭಾಷ್ ಸರ್ಕಾರ್ ಮಾತನಾಡಿ, ‘ನಮ್ಮ ನಾಗರಿಕತೆಯು ನೀಡಿರುವ ಎಲ್ಲ ಕೊಡುಗೆಗಳ ಬಗ್ಗೆ ಗೌರವ ಇಟ್ಟುಕೊಳ್ಳಬೇಕು. ಪ್ರಾಚೀನ ವಿಜ್ಞಾನವಾದ ಯೋಗವನ್ನೂ ಹೆಮ್ಮೆಯ ಭಾವದಿಂದ ನೋಡಬೇಕು’ ಎಂದು ಸಲಹೆ ನೀಡಿದರು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಆರ್ಟ್ ಆಫ್ ಲಿವಿಂಗ್ ಸಮಗ್ರ ಶಿಕ್ಷಣವನ್ನು ಭಾರತದಾದ್ಯಂತ ನೀಡುತ್ತಿದ್ದು, 1200 ಉಚಿತ ಶಾಲೆಗಳನ್ನು ನಡೆಸುತ್ತಿದೆ. ಒಂದು ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಉಚಿತವಾಗಿ ಶಿಕ್ಷಣ ಪಡೆಯುತ್ತಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ತುಮಕೂರಿನ ಸರ್ಕಾರಿ ಸಂಯೋಜಿತ ಪ್ರೌಢಶಾಲೆಯ ಪ್ರಾಂಶುಪಾಲ ಎಸ್. ಕೃಷ್ಣಪ್ಪ, ಮಹಾರಾಷ್ಟ್ರದ ದತ್ತಾತ್ರೇಯ ವಾರೆ, ಗುರುಗ್ರಾಮದ ರಷ್ಮಿ ಶ್ರೀವಾಸ್ತವ್ ಸಹಿತ ಅನೇಕ ಸಾಧಕರಿಗೆ, ವಿವಿಧ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>