<p><strong>ಬೆಂಗಳೂರು</strong>: ಮಕ್ಕಳ ಕ್ಯಾನ್ಸರ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಸೆಪ್ಟೆಂಬರ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.</p>.<p>ನಗರದ ಮೆಟ್ರೊ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಚಿತ್ರ ರಚಿಸಿ ಮಕ್ಕಳ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಕ್ಯಾನ್ಸರ್ಗೆ ಸಂಬಂಧಿಸಿದ ಸವಾಲುಗಳು ಮತ್ತು ಕಾಯಿಲೆಯನ್ನು ಬೇಗ ಪತ್ತೆಹಚ್ಚಿ ಚಿಕಿತ್ಸೆ ನೀಡುವುದು ಹೇಗೆ ಎಂಬುದರ ಕುರಿತು ಜನರಿಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. </p>.<p>ಪ್ರತಿ ವರ್ಷ ವಿಶ್ವದಾದ್ಯಂತ ಸುಮಾರು 5 ಲಕ್ಷ ಮಕ್ಕಳು ಹಾಗೂ ದೇಶದಲ್ಲಿ 50 ಸಾವಿರ ಮಕ್ಕಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕರ್ನಾಟಕದಲ್ಲಿ ಸುಮಾರು 3 ಸಾವಿರ ಪ್ರಕರಣಗಳು ದಾಖಲಾಗಿದ್ದು, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಪ್ರತಿ ವರ್ಷ ಸುಮಾರು 800 ಮಕ್ಕಳು ಕ್ಯಾನ್ಸರ್ ಚಿಕಿತ್ಸೆಗಾಗಿ ದಾಖಲಾಗುತ್ತಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಚಿಕಿತ್ಸೆ ಹಾಗೂ ಆರೈಕೆಗೆ ಸಂಸ್ಥೆಯು ಪ್ರತ್ಯೇಕ ಕಪೂರ್ ಬ್ಲಾಕ್ ಹೊಂದಿದೆ. ಮಕ್ಕಳ ವಿಭಾಗದಲ್ಲಿ ನಿತ್ಯ 4ರಿಂದ 5 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಶೇ 80ರಿಂದ 85ರಷ್ಟು ಮಕ್ಕಳು ಈ ರೋಗದಿಂದ ಗುಣಮುಖರಾಗುತ್ತಿದ್ದಾರೆ. ದೇಶದಲ್ಲೂ ಗುಣಮುಖರಾಗುವವರ ಸಂಖ್ಯೆ ಹೆಚ್ಚುತ್ತಿದೆ. ಇನ್ನೂ ಉತ್ತಮ ಫಲಿತಾಂಶ ಬರಬೇಕೆಂದರೆ, ರೋಗವನ್ನು ಆರಂಭದಲ್ಲಿಯೇ ಪತ್ತೆ ಮಾಡಿ, ಸುಲಭ ಮಾರ್ಗದಲ್ಲಿ ಚಿಕಿತ್ಸೆಯನ್ನು ಕೊಡಿಸಬೇಕು ಎಂದು ಸಲಹೆ ನೀಡಿದೆ.</p>.<p><strong>ಮಕ್ಕಳಲ್ಲಿ ಕಂಡುಬರುವ ಕ್ಯಾನ್ಸರ್ ಲಕ್ಷಣಗಳು</strong>: </p><p>ವಾರದಿಂದ ಕಾಡುವ ಜ್ವರ, ಎರಡು ವಾರಕ್ಕೂ ಹೆಚ್ಚು ಕುತ್ತಿಗೆ ಭಾಗದಲ್ಲಿ ಊತ ಇರುವುದು ಹಾಗೂ ಹೊಟ್ಟೆ ಅಥವಾ ದೇಹದ ಯಾವುದೇ ಭಾಗದಲ್ಲಿ ಗಡ್ಡೆ ಅಥವಾ ಊತ ಕಂಡು ಬರುವುದು, ಪದೇ ಪದೇ ವಾಂತಿ ಮತ್ತು ತಲೆ ನೋವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಕ್ಕಳ ಕ್ಯಾನ್ಸರ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಸೆಪ್ಟೆಂಬರ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.</p>.<p>ನಗರದ ಮೆಟ್ರೊ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಚಿತ್ರ ರಚಿಸಿ ಮಕ್ಕಳ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಕ್ಯಾನ್ಸರ್ಗೆ ಸಂಬಂಧಿಸಿದ ಸವಾಲುಗಳು ಮತ್ತು ಕಾಯಿಲೆಯನ್ನು ಬೇಗ ಪತ್ತೆಹಚ್ಚಿ ಚಿಕಿತ್ಸೆ ನೀಡುವುದು ಹೇಗೆ ಎಂಬುದರ ಕುರಿತು ಜನರಿಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. </p>.<p>ಪ್ರತಿ ವರ್ಷ ವಿಶ್ವದಾದ್ಯಂತ ಸುಮಾರು 5 ಲಕ್ಷ ಮಕ್ಕಳು ಹಾಗೂ ದೇಶದಲ್ಲಿ 50 ಸಾವಿರ ಮಕ್ಕಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕರ್ನಾಟಕದಲ್ಲಿ ಸುಮಾರು 3 ಸಾವಿರ ಪ್ರಕರಣಗಳು ದಾಖಲಾಗಿದ್ದು, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಪ್ರತಿ ವರ್ಷ ಸುಮಾರು 800 ಮಕ್ಕಳು ಕ್ಯಾನ್ಸರ್ ಚಿಕಿತ್ಸೆಗಾಗಿ ದಾಖಲಾಗುತ್ತಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಚಿಕಿತ್ಸೆ ಹಾಗೂ ಆರೈಕೆಗೆ ಸಂಸ್ಥೆಯು ಪ್ರತ್ಯೇಕ ಕಪೂರ್ ಬ್ಲಾಕ್ ಹೊಂದಿದೆ. ಮಕ್ಕಳ ವಿಭಾಗದಲ್ಲಿ ನಿತ್ಯ 4ರಿಂದ 5 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಶೇ 80ರಿಂದ 85ರಷ್ಟು ಮಕ್ಕಳು ಈ ರೋಗದಿಂದ ಗುಣಮುಖರಾಗುತ್ತಿದ್ದಾರೆ. ದೇಶದಲ್ಲೂ ಗುಣಮುಖರಾಗುವವರ ಸಂಖ್ಯೆ ಹೆಚ್ಚುತ್ತಿದೆ. ಇನ್ನೂ ಉತ್ತಮ ಫಲಿತಾಂಶ ಬರಬೇಕೆಂದರೆ, ರೋಗವನ್ನು ಆರಂಭದಲ್ಲಿಯೇ ಪತ್ತೆ ಮಾಡಿ, ಸುಲಭ ಮಾರ್ಗದಲ್ಲಿ ಚಿಕಿತ್ಸೆಯನ್ನು ಕೊಡಿಸಬೇಕು ಎಂದು ಸಲಹೆ ನೀಡಿದೆ.</p>.<p><strong>ಮಕ್ಕಳಲ್ಲಿ ಕಂಡುಬರುವ ಕ್ಯಾನ್ಸರ್ ಲಕ್ಷಣಗಳು</strong>: </p><p>ವಾರದಿಂದ ಕಾಡುವ ಜ್ವರ, ಎರಡು ವಾರಕ್ಕೂ ಹೆಚ್ಚು ಕುತ್ತಿಗೆ ಭಾಗದಲ್ಲಿ ಊತ ಇರುವುದು ಹಾಗೂ ಹೊಟ್ಟೆ ಅಥವಾ ದೇಹದ ಯಾವುದೇ ಭಾಗದಲ್ಲಿ ಗಡ್ಡೆ ಅಥವಾ ಊತ ಕಂಡು ಬರುವುದು, ಪದೇ ಪದೇ ವಾಂತಿ ಮತ್ತು ತಲೆ ನೋವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>