<p><strong>ಬೆಂಗಳೂರು</strong>: ಮತದಾರರನ್ನು ಮತಗಟ್ಟೆಯತ್ತ ಸೆಳೆಯುವ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಲೈಂಗಿಕ ಅಲ್ಪಸಂಖ್ಯಾತ ಕಲಾವಿದರ ತಂಡದಿಂದ ಗೋಡೆ ಚಿತ್ರಗಳನ್ನು ಬಿಡಿಸುವ ಕಾರ್ಯವನ್ನು ಚುನಾವಣಾ ಆಯೋಗ ಮಾಡಿದೆ.</p>.<p>ಲಿಂಗತ್ವ ಅಲ್ಪಸಂಖ್ಯಾತ ಕಲಾವಿದರಾದ ‘ಅರವಾಣಿ ಆರ್ಟ್ ಪ್ರಾಜೆಕ್ಟ್’ ತಂಡವು ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯಚುನಾವಣಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 3 ಮಹಡಿ ಕಟ್ಟಡದ ಗೋಡೆಗಳ ಮೇಲೆ ಕಣ್ಮನ ಸೆಳೆಯುವ ಚಿತ್ತಾರಗಳನ್ನು ಮೂಡಿಸಿದೆ.</p>.<p>ಮತದಾನದ ಮಹತ್ವ, ಯುವಕರು, ಮಹಿಳೆಯರು ಸೇರಿ ಸಮಾಜದ ಎಲ್ಲರ ಸಹಭಾಗಿತ್ವ ಸಾರುವ ವೈಶಿಷ್ಟ್ಯಪೂರ್ಣ ವರ್ಣಚಿತ್ರಗಳನ್ನು ಚಿತ್ತಾಕರ್ಷಕವಾಗಿ ಕಲಾವಿದರು ಚಿತ್ರಿಸಿದ್ದಾರೆ.</p>.<p>ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ಸಶಕ್ತಗೊಳಿಸುವ ಆಶಯದೊಂದಿಗೆ ‘ಅರವಾಣಿ ಆರ್ಟ್ ಪ್ರಾಜೆಕ್ಟ್’ ಸಂಸ್ಥೆ ಹುಟ್ಟಿಕೊಂಡಿದೆ. ಈ ಸಮುದಾಯದವಲ್ಲಿ ಇರುವ ಕೀಳರಿಮೆ ತೊಡೆದು ಪ್ರತಿಭೆಯನ್ನು ಪ್ರೋತ್ಸಾಹಿಸಿ ಸಮಾಜದಲ್ಲಿ ಗುರುತಿಸಿಕೊಳ್ಳಲು ನೆರವಾಗುತ್ತಿದೆ. ಈ ಸಂಸ್ಥೆಯ ಕಲಾವಿದರು ಬೆಂಗಳೂರು, ಮುಂಬೈ, ಚೆನ್ನೈ, ಹೈದರಾಬಾದ್, ಕೋಲ್ಕತ್ತ ಸೇರಿ ಪ್ರಮುಖ ನಗರಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಮೆಟ್ರೊ ಪಿಲ್ಲರ್ಗಳು, ಸರ್ಕಾರಿ ಕಚೇರಿ ಗೋಡೆಗಳು ಸೇರಿ ಜನನಿಬಿಡ ಪ್ರದೇಶಗಳಲ್ಲಿ ಮತದಾನದ ಮಹತ್ವ ಸಾರುವ ಕಲಾಕೃತಿಗಳನ್ನು ರಚಿಸಲು ಈ ತಂಡಕ್ಕೆ ಮತ್ತೊಂದು ಅವಕಾಶವನ್ನು ಮುಖ್ಯ ಚುನಾವಣಾಧಿಕಾರಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮತದಾರರನ್ನು ಮತಗಟ್ಟೆಯತ್ತ ಸೆಳೆಯುವ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಲೈಂಗಿಕ ಅಲ್ಪಸಂಖ್ಯಾತ ಕಲಾವಿದರ ತಂಡದಿಂದ ಗೋಡೆ ಚಿತ್ರಗಳನ್ನು ಬಿಡಿಸುವ ಕಾರ್ಯವನ್ನು ಚುನಾವಣಾ ಆಯೋಗ ಮಾಡಿದೆ.</p>.<p>ಲಿಂಗತ್ವ ಅಲ್ಪಸಂಖ್ಯಾತ ಕಲಾವಿದರಾದ ‘ಅರವಾಣಿ ಆರ್ಟ್ ಪ್ರಾಜೆಕ್ಟ್’ ತಂಡವು ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯಚುನಾವಣಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 3 ಮಹಡಿ ಕಟ್ಟಡದ ಗೋಡೆಗಳ ಮೇಲೆ ಕಣ್ಮನ ಸೆಳೆಯುವ ಚಿತ್ತಾರಗಳನ್ನು ಮೂಡಿಸಿದೆ.</p>.<p>ಮತದಾನದ ಮಹತ್ವ, ಯುವಕರು, ಮಹಿಳೆಯರು ಸೇರಿ ಸಮಾಜದ ಎಲ್ಲರ ಸಹಭಾಗಿತ್ವ ಸಾರುವ ವೈಶಿಷ್ಟ್ಯಪೂರ್ಣ ವರ್ಣಚಿತ್ರಗಳನ್ನು ಚಿತ್ತಾಕರ್ಷಕವಾಗಿ ಕಲಾವಿದರು ಚಿತ್ರಿಸಿದ್ದಾರೆ.</p>.<p>ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ಸಶಕ್ತಗೊಳಿಸುವ ಆಶಯದೊಂದಿಗೆ ‘ಅರವಾಣಿ ಆರ್ಟ್ ಪ್ರಾಜೆಕ್ಟ್’ ಸಂಸ್ಥೆ ಹುಟ್ಟಿಕೊಂಡಿದೆ. ಈ ಸಮುದಾಯದವಲ್ಲಿ ಇರುವ ಕೀಳರಿಮೆ ತೊಡೆದು ಪ್ರತಿಭೆಯನ್ನು ಪ್ರೋತ್ಸಾಹಿಸಿ ಸಮಾಜದಲ್ಲಿ ಗುರುತಿಸಿಕೊಳ್ಳಲು ನೆರವಾಗುತ್ತಿದೆ. ಈ ಸಂಸ್ಥೆಯ ಕಲಾವಿದರು ಬೆಂಗಳೂರು, ಮುಂಬೈ, ಚೆನ್ನೈ, ಹೈದರಾಬಾದ್, ಕೋಲ್ಕತ್ತ ಸೇರಿ ಪ್ರಮುಖ ನಗರಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಮೆಟ್ರೊ ಪಿಲ್ಲರ್ಗಳು, ಸರ್ಕಾರಿ ಕಚೇರಿ ಗೋಡೆಗಳು ಸೇರಿ ಜನನಿಬಿಡ ಪ್ರದೇಶಗಳಲ್ಲಿ ಮತದಾನದ ಮಹತ್ವ ಸಾರುವ ಕಲಾಕೃತಿಗಳನ್ನು ರಚಿಸಲು ಈ ತಂಡಕ್ಕೆ ಮತ್ತೊಂದು ಅವಕಾಶವನ್ನು ಮುಖ್ಯ ಚುನಾವಣಾಧಿಕಾರಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>