<p><strong>ಬೆಂಗಳೂರು:</strong> ‘ವಿದ್ಯುತ್ ಅವಘಡದಿಂದ ಸಂಭವಿಸುವ ಪ್ರಾಣ ಹಾನಿ ತಪ್ಪಿಸಲು, ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಉಂಟಾಗುವ ಅನಾಹುತ, ಆಸ್ತಿ ನಷ್ಟ ತಪ್ಪಿಸಲು ಜನರು ಜಾಗೃತರಾಗುವುದು ಅಗತ್ಯ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕೈಗಾರಿಕೆಯಲ್ಲಿ ಕೆಲಸ ಮಾಡುವವರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ವಿದ್ಯುತ್ ಸರಬರಾಜು ಕಂಪನಿ ಸಿಬ್ಬಂದಿ, ವಿದ್ಯುತ್ ಗುತ್ತಿಗೆದಾರರು, ರೈತರು ಹಾಗೂ ಜನರನ್ನು ಈ ಅಭಿಯಾನದ ಮೂಲಕ ತಲುಪಬೇಕು ಎಂದರು.</p>.<p>ರಾಜ್ಯದಲ್ಲಿ ಅಳವಡಿಸಿರುವ, ಮುಂದೆ ಅಳವಡಿಸಲಾಗುವ ವಿದ್ಯುತ್ ಮಾರ್ಗಗಳು, ವಿದ್ಯುತ್ ಪರಿವರ್ತಕಗಳು, ವಿದ್ಯುತ್ ಉಪಸ್ಥಾವರಗಳು, ಬಹುಮಹಡಿ ಕಟ್ಟಡಗಳು ಸೇರಿದಂತೆ ಎಲ್ಲ ವಿದ್ಯುತ್ ಸ್ಥಾವರಗಳಲ್ಲೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯ ವಿದ್ಯುತ್ ಪರಿವೀಕ್ಷಕ ರಾಡ್ಸನ್ ಅಪ್ಪಚ್ಚು, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿದ್ಯುತ್ ಅವಘಡದಿಂದ ಸಂಭವಿಸುವ ಪ್ರಾಣ ಹಾನಿ ತಪ್ಪಿಸಲು, ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಉಂಟಾಗುವ ಅನಾಹುತ, ಆಸ್ತಿ ನಷ್ಟ ತಪ್ಪಿಸಲು ಜನರು ಜಾಗೃತರಾಗುವುದು ಅಗತ್ಯ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕೈಗಾರಿಕೆಯಲ್ಲಿ ಕೆಲಸ ಮಾಡುವವರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ವಿದ್ಯುತ್ ಸರಬರಾಜು ಕಂಪನಿ ಸಿಬ್ಬಂದಿ, ವಿದ್ಯುತ್ ಗುತ್ತಿಗೆದಾರರು, ರೈತರು ಹಾಗೂ ಜನರನ್ನು ಈ ಅಭಿಯಾನದ ಮೂಲಕ ತಲುಪಬೇಕು ಎಂದರು.</p>.<p>ರಾಜ್ಯದಲ್ಲಿ ಅಳವಡಿಸಿರುವ, ಮುಂದೆ ಅಳವಡಿಸಲಾಗುವ ವಿದ್ಯುತ್ ಮಾರ್ಗಗಳು, ವಿದ್ಯುತ್ ಪರಿವರ್ತಕಗಳು, ವಿದ್ಯುತ್ ಉಪಸ್ಥಾವರಗಳು, ಬಹುಮಹಡಿ ಕಟ್ಟಡಗಳು ಸೇರಿದಂತೆ ಎಲ್ಲ ವಿದ್ಯುತ್ ಸ್ಥಾವರಗಳಲ್ಲೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯ ವಿದ್ಯುತ್ ಪರಿವೀಕ್ಷಕ ರಾಡ್ಸನ್ ಅಪ್ಪಚ್ಚು, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>