<p><strong>ಬೆಂಗಳೂರು</strong>: ‘ನಗರದ ಸೌಂದರ್ಯ ಹೆಚ್ಚಿಸಬೇಕಾದರೆ ರಸ್ತೆ ಬದಿ ಕಸ ಬಿಸಾಡುವುದನ್ನು ನಿಲ್ಲಿಸಬೇಕು. ಈ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಪೂರ್ವ ವಲಯದ ಆಯುಕ್ತೆ ಸ್ನೇಹಲ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<p>ಗೋಪಾಲ್ ರಾಮನಾರಾಯಣ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ‘ಸ್ವಚ್ಛತಾ ಹಿ ಸೇವಾ 2024’ ಅಭಿಯಾನದಲ್ಲಿ ಕಪ್ಪು ಚುಕ್ಕೆಗಳ (ಕಸ ಸುರಿಯುವ ಸ್ಥಳ ಬ್ಲ್ಯಾಕ್ ಸ್ಪಾಟ್) ಸೌಂದರ್ಯೀಕರಣ ಹಾಗೂ ಸ್ವಚ್ಛತೆಯ ಕುರಿತು ಅವರು ಮಾತನಾಡಿದರು.</p>.<p>ನಗರದಲ್ಲಿ ಹಲವರು, ಮನೆಗೆ ಬರುವ ಆಟೊ ಟಿಪ್ಪರ್ಗಳಿಗೆ ಕಸ ನೀಡದೆ ರಸ್ತೆ ಬದಿ ಕಸ ಬಿಸಾಡುತ್ತಿದ್ದಾರೆ. ಅದರಿಂದ ನಗರದ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಆದ್ದರಿಂದ ಯಾರೂ ರಸ್ತೆ ಬದಿ ಕಸ ಬಿಸಾಡದಂತೆ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.</p>.<p>ಡಾಲರ್ಸ್ ಕಾಲೊನಿಯ 4, 5 ಮತ್ತು 3ನೇ ಅಡ್ಡರಸ್ತೆಯಲ್ಲಿ ಮನೆ ಮನೆಯಿಂದ ಕಸ ಸಂಗ್ರಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಹಸಿಕಸ– ಒಣಕಸ ಬೇರ್ಪಡಿಸುವಿಕೆ ಬಗ್ಗೆ ಅರಿವು ಮೂಡಿಸಲಾಯಿತು. </p>.<p>ಬಹುಮಾನ: ಶಾಲಾ ಮಕ್ಕಳಿಗೆ ಘನತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಸುಮಾರು 40 ಮಕ್ಕಳು ಭಾಗವಹಿಸಿದ್ದು, 15 ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಗರದ ಸೌಂದರ್ಯ ಹೆಚ್ಚಿಸಬೇಕಾದರೆ ರಸ್ತೆ ಬದಿ ಕಸ ಬಿಸಾಡುವುದನ್ನು ನಿಲ್ಲಿಸಬೇಕು. ಈ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಪೂರ್ವ ವಲಯದ ಆಯುಕ್ತೆ ಸ್ನೇಹಲ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<p>ಗೋಪಾಲ್ ರಾಮನಾರಾಯಣ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ‘ಸ್ವಚ್ಛತಾ ಹಿ ಸೇವಾ 2024’ ಅಭಿಯಾನದಲ್ಲಿ ಕಪ್ಪು ಚುಕ್ಕೆಗಳ (ಕಸ ಸುರಿಯುವ ಸ್ಥಳ ಬ್ಲ್ಯಾಕ್ ಸ್ಪಾಟ್) ಸೌಂದರ್ಯೀಕರಣ ಹಾಗೂ ಸ್ವಚ್ಛತೆಯ ಕುರಿತು ಅವರು ಮಾತನಾಡಿದರು.</p>.<p>ನಗರದಲ್ಲಿ ಹಲವರು, ಮನೆಗೆ ಬರುವ ಆಟೊ ಟಿಪ್ಪರ್ಗಳಿಗೆ ಕಸ ನೀಡದೆ ರಸ್ತೆ ಬದಿ ಕಸ ಬಿಸಾಡುತ್ತಿದ್ದಾರೆ. ಅದರಿಂದ ನಗರದ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಆದ್ದರಿಂದ ಯಾರೂ ರಸ್ತೆ ಬದಿ ಕಸ ಬಿಸಾಡದಂತೆ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.</p>.<p>ಡಾಲರ್ಸ್ ಕಾಲೊನಿಯ 4, 5 ಮತ್ತು 3ನೇ ಅಡ್ಡರಸ್ತೆಯಲ್ಲಿ ಮನೆ ಮನೆಯಿಂದ ಕಸ ಸಂಗ್ರಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಹಸಿಕಸ– ಒಣಕಸ ಬೇರ್ಪಡಿಸುವಿಕೆ ಬಗ್ಗೆ ಅರಿವು ಮೂಡಿಸಲಾಯಿತು. </p>.<p>ಬಹುಮಾನ: ಶಾಲಾ ಮಕ್ಕಳಿಗೆ ಘನತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಸುಮಾರು 40 ಮಕ್ಕಳು ಭಾಗವಹಿಸಿದ್ದು, 15 ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>