ಈ ಬಗ್ಗೆ ಅವರು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಪತ್ರ ಬರೆದಿದ್ದಾರೆ. ‘ಸರ್ಕಾರಿ ಸುತ್ತೋಲೆಯ ಪ್ರಕಾರ ಕನ್ನಡವನ್ನು ರಾಜ್ಯದಾದ್ಯಂತ ಆಡಳಿತ ಭಾಷೆಯಾಗಿ ಎಲ್ಲ ಹಂತದಲ್ಲೂ ಕಡ್ಡಾಯವಾಗಿ ಜಾರಿಗೆ ತರಲಾಗಿದೆ. ಸರ್ಕಾರಿ ಇಲಾಖೆ ಹಾಗೂ ಕಚೇರಿಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಆಗುವ ಅಡೆತಡೆಗಳಿಗೆ ಆಯಾ ಇಲಾಖೆಗಳ ಮುಖ್ಯಸ್ಥರನ್ನು ಜವಾಬ್ದಾರರನ್ನಾಗಿ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗಾಗಿ, ಬೆಂಗಳೂರು ನಗರ ಪೊಲೀಸ್ ಕಚೇರಿಯು ಕನ್ನಡಕ್ಕೆ ಆದ್ಯತೆ
ನೀಡಿ, ಎಲ್ಲೆಡೆ ಕನ್ನಡವನ್ನು ಬಳಸಬೇಕು’ ಎಂದು ತಿಳಿಸಿದ್ದಾರೆ.