‘ಜನರ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಕಂದಾಯ ಅದಾಲತ್ ಯೋಜನೆ ಅಡಿ, ಕಂದಾಯ ವೃತ್ತಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಕ್ಷಮದಲ್ಲಿ ರೈತಾಪಿ ವರ್ಗದ ಎಲ್ಲಾ ರೀತಿಯ ಖಾತೆ ಬದಲಾವಣೆ, ಪಹಣಿ ತಿದ್ದುಪಡಿ, ಬೆಳೆ ಇಂದೀಕರಣ ಸೌಲಭ್ಯ ಒದಗಿಸಿದೆ. ಅದರ ಮುಂದುವರಿದ ಭಾಗವಾಗಿ ಈ ಕಾರ್ಯಕ್ರಮ ನಡೆಸುತ್ತಿದ್ದೇವೆ. ಜನತೆ ಸಕಾಲದಲ್ಲಿ ಹಾಜರಿದ್ದು ಸಮಸ್ಯೆ ಬಗೆಹರಿಸಿಕೊಳ್ಳಬೇಕಾಗುತ್ತದೆ’ ಎಂದು ತಹಶೀಲ್ದಾರ್ ಹೇಳಿದರು.