<p><strong>ಬೆಂಗಳೂರು:</strong> ಕೋವಿಡ್ ಸಾಂಕ್ರಾಮಿಕ ಕಾಯಿಲೆಯಿಂದ ತತ್ತರಿಸಿದ್ದ ಜನತೆಗೆ ಈ ಬಾರಿಯ ದಸರಾ ನವ ಉಲ್ಲಾಸ ಮೂಡಿಸಿತು.</p>.<p>ಧಾರ್ಮಿಕ ಮತ್ತು ಸಂಸ್ಕೃತಿಯ ಆಚರಣೆಯ ಸಮ್ಮಿಲನವಾದ ಈ ನಾಡಹಬ್ಬವನ್ನು ಸಂಭ್ರಮದಿಂದ ಸರಳವಾಗಿ ಆಚರಿಸಿದರು. ಆಯುಧ ಪೂಜೆ ಮತ್ತು ವಿಜಯ ದಶಮಿಯನ್ನು ಜನತೆ ಸಂತಸದಿಂದ ಆಚರಿಸಿ ಸಂಭ್ರಮಿಸಿದರು. ವಾಹನಗಳು, ಕಚೇರಿ, ಮನೆಯಲ್ಲಿರುವ ವಸ್ತುಗಳನ್ನು ಹೂವುಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು.</p>.<p>ಬೆಂಗಾಲಿ ಸಮುದಾಯದ ಜನರು ನವರಾತ್ರಿ ಆಚರಣೆ ಸಂದರ್ಭದಲ್ಲಿ ಪ್ರತಿಷ್ಠಾಪಿಸಿದ್ದ ದುರ್ಗಾ ವಿಗ್ರಹಗಳನ್ನು ಹಲಸೂರು ಕೆರೆಯಲ್ಲಿ ಶುಕ್ರವಾರ ವಿಸರ್ಜಿಸಿದರು. ಮೆರವಣಿಗೆಯಲ್ಲಿ ಸಾಗಿದ ಜನರು ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ಇಸ್ಕಾನ್ನಲ್ಲಿಯೂ ಶ್ರದ್ಧಾಭಕ್ತಿಯಿಂದ ವಿಜಯದಶಮಿ ಆಚರಿಸಲಾಯಿತು. ಶ್ರೀ ಕೃಷ್ಣ ಬಲರಾಮ ದೇವರಿಗೆ ರಾಮ-ಲಕ್ಷ್ಮಣರ ಅಲಂಕಾರ ಮಾಡಲಾಗಿತ್ತು ಮತ್ತು ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಇಸ್ಕಾನ್ ಅಧ್ಯಕ್ಷರಾದ ಮಧುಪಂಡಿತ ದಾಸರು ವಿಜಯದಶಮಿ ಹಬ್ಬದ ಕುರಿತು ಪ್ರವಚನ ಮಾಡಿದರು. ಸಂಜೆ ಶ್ರೀರಾಮ ತಾರಕ ಯಜ್ಞ ಹಾಗೂ ಶ್ರೀ ರಾಮ ಕೀರ್ತನೆಗಳನ್ನು ಆಯೋಜಿಸಲಾಗಿತ್ತು.</p>.<p>ಮಲ್ಲೇಶ್ವರದ ಕನ್ಯಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ‘ಸಾಗರ ಕನ್ಯೆ ಶ್ರೀವಾಸವಿ’ ಸೆಟ್ ಭಕ್ತಾದಿಗಳ ಗಮನ ಸೆಳೆಯುತ್ತಿದೆ. ರಾತ್ರಿವರೆಗೂ ಭಕ್ತಾದಿಗಳು ಉದ್ದನೇಯ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.</p>.<p>ಆರ್.ಟಿ. ನಗರದಲ್ಲಿ ಸಿದ್ಧಾರ್ಥ ಸಾಂಸ್ಕೃತಿಕ ಪರಿಷತ್ ವತಿಯಿಂದ ದೇವಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.</p>.<p>ಹಬ್ಬದ ಸಂಭ್ರಮದಿಂದ ಮಾರುಕಟ್ಟೆ ಪ್ರದೇಶಗಳು ಸಹ ಕಳೆಗಟ್ಟಿದ್ದವು. ನಗರದ ಕೆ.ಆರ್.ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರ ಮುಂತಾದ ಪ್ರದೇಶಗಳಲ್ಲಿ ಜನಜಂಗುಳಿ ಕಂಡು ಬಂತು.</p>.<p><strong>ಅಂಬೇಡ್ಕರ್ ಗುಟ್ಟ: ದಸರಾ ಜಾತ್ರೆ</strong></p>.<p><strong>ಕೆ.ಆರ್.ಪುರ:</strong>ಮಹದೇವಪುರ ಕ್ಷೇತ್ರದ ಕಾಡುಗೋಡಿ ವಾರ್ಡ್ನ ಅಂಬೇಡ್ಕರ್ ಗುಟ್ಟದಲ್ಲಿ ದಸರಾ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂದಸರಾ ಜಾತ್ರೆ ನೆರವೇರಿತು.</p>.<p>ಗ್ರಾಮದ ಹೆಬ್ಬಾಗಿಲ ಮೂಲಕ ತಮಟೆ ವಾದ್ಯ ಮತ್ತು ಕಳಶಗಳೊಂದಿಗೆ ಸುತ್ತಮುತ್ತಲಿನ ಗ್ರಾಮಗಳಿಂದಯಲ್ಲಮ್ಮ, ಸಪ್ಪಲಮ್ಮ, ಮಾರಮ್ಮ, ಮುನೇಶ್ವರ ಸ್ವಾಮಿ, ಬಸವೇಶ್ವರ ಸ್ವಾಮಿ, ಆಂಜನೇಯ ಸ್ವಾಮಿ, ಮಹಾಗಣಪತಿ ದೇವರುಗಳ ಪಲ್ಲಕ್ಕಿಗಳು<br />ಮೆರವಣಿಗೆಯೊಂದಿಗೆ ದಸರಾ ಮೈದಾನಕ್ಕೆ ಬಂದವು.</p>.<p>ಪಟ್ಟಂದೂರು ಅಗ್ರಹಾರ, ನಲ್ಲೂರಹಳ್ಳಿ, ರಾಮಗೊಂಡನಹಳ್ಳಿ, ವೈಟ್ಫೀಲ್ಡ್, ಹಗದೂರು, ಗಾಂಧಿಪುರ, ಇಮ್ಮಡಿಹಳ್ಳಿ, ನಾಗೊಂಡಹಳ್ಳಿ, ಚನ್ನಸಂದ್ರ, ಕಾಡುಗೋಡಿ, ಬೆಳ್ತೂರು, ದಿನ್ನೂರು ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ನೆರೆದಿದ್ದರು.</p>.<p>ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿ, ‘ಕೋವಿಡ್ನಿಂದ ಉತ್ಸವಗಳು ಕಡಿಮೆಯಾಗಿದ್ದವು. ಹಬ್ಬಗಳು ಈ ನೆಲದ ಸಾಂಸ್ಕೃತಿಕ ಚೌಕಟ್ಟು ಹೊಂದಿರುತ್ತವೆ. ಜಾತ್ರೆಗೆ 60ಕ್ಕೂ ಹೆಚ್ಚು ಗ್ರಾಮಗಳಿಂದ ಬಂದಿರುವ ದೇವರುಗಳನ್ನು ಭಕ್ತರು ಕಣ್ತುಂಬಿಕೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಸಾಂಕ್ರಾಮಿಕ ಕಾಯಿಲೆಯಿಂದ ತತ್ತರಿಸಿದ್ದ ಜನತೆಗೆ ಈ ಬಾರಿಯ ದಸರಾ ನವ ಉಲ್ಲಾಸ ಮೂಡಿಸಿತು.</p>.<p>ಧಾರ್ಮಿಕ ಮತ್ತು ಸಂಸ್ಕೃತಿಯ ಆಚರಣೆಯ ಸಮ್ಮಿಲನವಾದ ಈ ನಾಡಹಬ್ಬವನ್ನು ಸಂಭ್ರಮದಿಂದ ಸರಳವಾಗಿ ಆಚರಿಸಿದರು. ಆಯುಧ ಪೂಜೆ ಮತ್ತು ವಿಜಯ ದಶಮಿಯನ್ನು ಜನತೆ ಸಂತಸದಿಂದ ಆಚರಿಸಿ ಸಂಭ್ರಮಿಸಿದರು. ವಾಹನಗಳು, ಕಚೇರಿ, ಮನೆಯಲ್ಲಿರುವ ವಸ್ತುಗಳನ್ನು ಹೂವುಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು.</p>.<p>ಬೆಂಗಾಲಿ ಸಮುದಾಯದ ಜನರು ನವರಾತ್ರಿ ಆಚರಣೆ ಸಂದರ್ಭದಲ್ಲಿ ಪ್ರತಿಷ್ಠಾಪಿಸಿದ್ದ ದುರ್ಗಾ ವಿಗ್ರಹಗಳನ್ನು ಹಲಸೂರು ಕೆರೆಯಲ್ಲಿ ಶುಕ್ರವಾರ ವಿಸರ್ಜಿಸಿದರು. ಮೆರವಣಿಗೆಯಲ್ಲಿ ಸಾಗಿದ ಜನರು ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ಇಸ್ಕಾನ್ನಲ್ಲಿಯೂ ಶ್ರದ್ಧಾಭಕ್ತಿಯಿಂದ ವಿಜಯದಶಮಿ ಆಚರಿಸಲಾಯಿತು. ಶ್ರೀ ಕೃಷ್ಣ ಬಲರಾಮ ದೇವರಿಗೆ ರಾಮ-ಲಕ್ಷ್ಮಣರ ಅಲಂಕಾರ ಮಾಡಲಾಗಿತ್ತು ಮತ್ತು ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಇಸ್ಕಾನ್ ಅಧ್ಯಕ್ಷರಾದ ಮಧುಪಂಡಿತ ದಾಸರು ವಿಜಯದಶಮಿ ಹಬ್ಬದ ಕುರಿತು ಪ್ರವಚನ ಮಾಡಿದರು. ಸಂಜೆ ಶ್ರೀರಾಮ ತಾರಕ ಯಜ್ಞ ಹಾಗೂ ಶ್ರೀ ರಾಮ ಕೀರ್ತನೆಗಳನ್ನು ಆಯೋಜಿಸಲಾಗಿತ್ತು.</p>.<p>ಮಲ್ಲೇಶ್ವರದ ಕನ್ಯಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ‘ಸಾಗರ ಕನ್ಯೆ ಶ್ರೀವಾಸವಿ’ ಸೆಟ್ ಭಕ್ತಾದಿಗಳ ಗಮನ ಸೆಳೆಯುತ್ತಿದೆ. ರಾತ್ರಿವರೆಗೂ ಭಕ್ತಾದಿಗಳು ಉದ್ದನೇಯ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.</p>.<p>ಆರ್.ಟಿ. ನಗರದಲ್ಲಿ ಸಿದ್ಧಾರ್ಥ ಸಾಂಸ್ಕೃತಿಕ ಪರಿಷತ್ ವತಿಯಿಂದ ದೇವಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.</p>.<p>ಹಬ್ಬದ ಸಂಭ್ರಮದಿಂದ ಮಾರುಕಟ್ಟೆ ಪ್ರದೇಶಗಳು ಸಹ ಕಳೆಗಟ್ಟಿದ್ದವು. ನಗರದ ಕೆ.ಆರ್.ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರ ಮುಂತಾದ ಪ್ರದೇಶಗಳಲ್ಲಿ ಜನಜಂಗುಳಿ ಕಂಡು ಬಂತು.</p>.<p><strong>ಅಂಬೇಡ್ಕರ್ ಗುಟ್ಟ: ದಸರಾ ಜಾತ್ರೆ</strong></p>.<p><strong>ಕೆ.ಆರ್.ಪುರ:</strong>ಮಹದೇವಪುರ ಕ್ಷೇತ್ರದ ಕಾಡುಗೋಡಿ ವಾರ್ಡ್ನ ಅಂಬೇಡ್ಕರ್ ಗುಟ್ಟದಲ್ಲಿ ದಸರಾ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂದಸರಾ ಜಾತ್ರೆ ನೆರವೇರಿತು.</p>.<p>ಗ್ರಾಮದ ಹೆಬ್ಬಾಗಿಲ ಮೂಲಕ ತಮಟೆ ವಾದ್ಯ ಮತ್ತು ಕಳಶಗಳೊಂದಿಗೆ ಸುತ್ತಮುತ್ತಲಿನ ಗ್ರಾಮಗಳಿಂದಯಲ್ಲಮ್ಮ, ಸಪ್ಪಲಮ್ಮ, ಮಾರಮ್ಮ, ಮುನೇಶ್ವರ ಸ್ವಾಮಿ, ಬಸವೇಶ್ವರ ಸ್ವಾಮಿ, ಆಂಜನೇಯ ಸ್ವಾಮಿ, ಮಹಾಗಣಪತಿ ದೇವರುಗಳ ಪಲ್ಲಕ್ಕಿಗಳು<br />ಮೆರವಣಿಗೆಯೊಂದಿಗೆ ದಸರಾ ಮೈದಾನಕ್ಕೆ ಬಂದವು.</p>.<p>ಪಟ್ಟಂದೂರು ಅಗ್ರಹಾರ, ನಲ್ಲೂರಹಳ್ಳಿ, ರಾಮಗೊಂಡನಹಳ್ಳಿ, ವೈಟ್ಫೀಲ್ಡ್, ಹಗದೂರು, ಗಾಂಧಿಪುರ, ಇಮ್ಮಡಿಹಳ್ಳಿ, ನಾಗೊಂಡಹಳ್ಳಿ, ಚನ್ನಸಂದ್ರ, ಕಾಡುಗೋಡಿ, ಬೆಳ್ತೂರು, ದಿನ್ನೂರು ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ನೆರೆದಿದ್ದರು.</p>.<p>ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿ, ‘ಕೋವಿಡ್ನಿಂದ ಉತ್ಸವಗಳು ಕಡಿಮೆಯಾಗಿದ್ದವು. ಹಬ್ಬಗಳು ಈ ನೆಲದ ಸಾಂಸ್ಕೃತಿಕ ಚೌಕಟ್ಟು ಹೊಂದಿರುತ್ತವೆ. ಜಾತ್ರೆಗೆ 60ಕ್ಕೂ ಹೆಚ್ಚು ಗ್ರಾಮಗಳಿಂದ ಬಂದಿರುವ ದೇವರುಗಳನ್ನು ಭಕ್ತರು ಕಣ್ತುಂಬಿಕೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>