ಮೋದಿ ಸಾರ್ವಜನಿಕ ಸಭೆಗಳನ್ನು ನಡೆಸಿದ ದಕ್ಷಿಣ ಕನ್ನಡ (ಮಂಗಳೂರು), ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಜೆಪಿ ಸ್ವೀಪ್ ಮಾಡಿದೆ. 2013ರ ಚುನಾವಣೆಯಲ್ಲಿ ಈ ಮೂರೂ ಜಿಲ್ಲೆಗಳಲ್ಲಿ ಬಿಜೆಪಿಯನ್ನು ಕಾಂಗ್ರೆಸ್ ಮಣ್ಣು ಮುಕ್ಕಿಸಿತ್ತು. ಆದರೆ, ಈ ಜಿಲ್ಲೆಗಳಲ್ಲಿ ಈ ಬಾರಿ ಪಕ್ಷ ಫೀನಿಕ್ಸ್ನಂತೆ ಚೇತರಿಸಿಕೊಳ್ಳಲು ಮೋದಿ ಅಲೆ ಕಾರಣವಾಗಿದೆ. ಅಲ್ಲದೆ ಮೋದಿ ಓಡಾಡಿದ ಶಿವಮೊಗ್ಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲೂ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಕೈಯಿಂದ ಕಸಿದುಕೊಳ್ಳಲು ಅವಕಾಶ ಮಾಡಿಕೊಟ್ಟಿದೆ.