<p><strong>ಬೆಂಗಳೂರು:</strong> ಮಕ್ಕಳಾಗದ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆಗಳನ್ನು ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ– ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ’ ತರಲಾಗಿದೆ. </p>.<p>ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಈ ಆದೇಶ ಒಂದು ವರ್ಷ ಮಾತ್ರ ಜಾರಿಯಲ್ಲಿ ಇರಲಿದೆ. ಯೋಜನೆಯಡಿ ಬಿಪಿಎಲ್ ಕುಟುಂಬದ 120 ದಂಪತಿಗೆ ಮಾತ್ರ ಈ ಚಿಕಿತ್ಸೆಗೆ ಅನುಮೋದನೆ ದೊರೆತಿದೆ. </p>.<p>‘ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿ’ (ಎಆರ್ಟಿ) ಮೂಲಕ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆ ನೀಡಲಾಗುತ್ತದೆ. ಖಾಸಗಿ ವ್ಯವಸ್ಥೆಯಡಿ ಈ ಚಿಕಿತ್ಸೆ ದುಬಾರಿಯಾಗಿರುವುದರಿಂದ ಯೋಜನೆಯಡಿ ಸೇರ್ಪಡೆ ಮಾಡಲಾಗಿದೆ. ಐವಿಎಫ್ ಸೇರಿ ವಿವಿಧ ವಿಧಾನಗಳ ಮೂಲಕ ಆಯ್ದ ದಂಪತಿಗೆ ಈ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. </p>.<p>ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು, ಸ್ವಾಯತ್ತ ಆರೋಗ್ಯ ಸಂಸ್ಥೆಗಳು ಹಾಗೂ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ಆದೇಶ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಕ್ಕಳಾಗದ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆಗಳನ್ನು ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ– ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ’ ತರಲಾಗಿದೆ. </p>.<p>ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಈ ಆದೇಶ ಒಂದು ವರ್ಷ ಮಾತ್ರ ಜಾರಿಯಲ್ಲಿ ಇರಲಿದೆ. ಯೋಜನೆಯಡಿ ಬಿಪಿಎಲ್ ಕುಟುಂಬದ 120 ದಂಪತಿಗೆ ಮಾತ್ರ ಈ ಚಿಕಿತ್ಸೆಗೆ ಅನುಮೋದನೆ ದೊರೆತಿದೆ. </p>.<p>‘ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿ’ (ಎಆರ್ಟಿ) ಮೂಲಕ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆ ನೀಡಲಾಗುತ್ತದೆ. ಖಾಸಗಿ ವ್ಯವಸ್ಥೆಯಡಿ ಈ ಚಿಕಿತ್ಸೆ ದುಬಾರಿಯಾಗಿರುವುದರಿಂದ ಯೋಜನೆಯಡಿ ಸೇರ್ಪಡೆ ಮಾಡಲಾಗಿದೆ. ಐವಿಎಫ್ ಸೇರಿ ವಿವಿಧ ವಿಧಾನಗಳ ಮೂಲಕ ಆಯ್ದ ದಂಪತಿಗೆ ಈ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. </p>.<p>ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು, ಸ್ವಾಯತ್ತ ಆರೋಗ್ಯ ಸಂಸ್ಥೆಗಳು ಹಾಗೂ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ಆದೇಶ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>