<p><strong>ಬೆಂಗಳೂರು:</strong> ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ’ (ಎಬಿ–ಎಆರ್ಕೆ) ಯೋಜನೆಯಡಿ ನಗರದ ನಾಲ್ಕು ಖಾಸಗಿ ಆಸ್ಪತ್ರೆಗಳಿಗೆ ದ್ವಿತೀಯ ಹಂತದ ಸರಳ ಚಿಕಿತ್ಸಾ ವಿಧಾನಗಳಿಗೆ (2ಎ) ಅವಕಾಶ ನೀಡಲಾಗಿದೆ. ಇದರಿಂದಾಗಿ ಫಲಾನುಭವಿಗಳು ಯಾವುದೇ ಶಿಫಾರಸು ಪತ್ರ ಪಡೆಯದೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. </p>.<p>ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು, ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು, ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಹಾಗೂ ಡಾ. ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಯೋಜನೆಯಡಿ ದ್ವಿತೀಯ ಹಂತದ ಸರಳ ಚಿಕಿತ್ಸಾ ವಿಧಾನಗಳನ್ನು ಒದಗಿಸಲು ಅನುಮತಿ ನೀಡಲಾಗಿದೆ. ಸದ್ಯ ಈ ವಿಧಾನದ ಚಿಕಿತ್ಸೆಗಳನ್ನು ಯೋಜನೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಒದಗಿಸಲಾಗುತ್ತಿತ್ತು.</p>.<p>ಒಂದು ವರ್ಷದ ಅವಧಿಗೆ ಪ್ರಾಯೋಗಿಕವಾಗಿ ನಾಲ್ಕು ಆಸ್ಪತ್ರೆಗಳಲ್ಲಿ ದ್ವಿತೀಯ ಹಂತದ ಸರಳ ಚಿಕಿತ್ಸಾ ವಿಧಾನಗಳನ್ನು ಪರಿಚಯಿಸಲಾಗಿದೆ. ಈ ಆಸ್ಪತ್ರೆಗಳಲ್ಲಿ ಇತರೆ ಚಿಕಿತ್ಸಾ ವಿಧಾನಗಳಿಗೂ ಶಿಫಾರಸು ಪ್ರಕ್ರಿಯೆಯ ವಿನಾಯಿತಿ ನೀಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆಗಳ ಕೊರತೆಯ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ’ (ಎಬಿ–ಎಆರ್ಕೆ) ಯೋಜನೆಯಡಿ ನಗರದ ನಾಲ್ಕು ಖಾಸಗಿ ಆಸ್ಪತ್ರೆಗಳಿಗೆ ದ್ವಿತೀಯ ಹಂತದ ಸರಳ ಚಿಕಿತ್ಸಾ ವಿಧಾನಗಳಿಗೆ (2ಎ) ಅವಕಾಶ ನೀಡಲಾಗಿದೆ. ಇದರಿಂದಾಗಿ ಫಲಾನುಭವಿಗಳು ಯಾವುದೇ ಶಿಫಾರಸು ಪತ್ರ ಪಡೆಯದೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. </p>.<p>ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು, ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು, ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಹಾಗೂ ಡಾ. ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ಯೋಜನೆಯಡಿ ದ್ವಿತೀಯ ಹಂತದ ಸರಳ ಚಿಕಿತ್ಸಾ ವಿಧಾನಗಳನ್ನು ಒದಗಿಸಲು ಅನುಮತಿ ನೀಡಲಾಗಿದೆ. ಸದ್ಯ ಈ ವಿಧಾನದ ಚಿಕಿತ್ಸೆಗಳನ್ನು ಯೋಜನೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಒದಗಿಸಲಾಗುತ್ತಿತ್ತು.</p>.<p>ಒಂದು ವರ್ಷದ ಅವಧಿಗೆ ಪ್ರಾಯೋಗಿಕವಾಗಿ ನಾಲ್ಕು ಆಸ್ಪತ್ರೆಗಳಲ್ಲಿ ದ್ವಿತೀಯ ಹಂತದ ಸರಳ ಚಿಕಿತ್ಸಾ ವಿಧಾನಗಳನ್ನು ಪರಿಚಯಿಸಲಾಗಿದೆ. ಈ ಆಸ್ಪತ್ರೆಗಳಲ್ಲಿ ಇತರೆ ಚಿಕಿತ್ಸಾ ವಿಧಾನಗಳಿಗೂ ಶಿಫಾರಸು ಪ್ರಕ್ರಿಯೆಯ ವಿನಾಯಿತಿ ನೀಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆಗಳ ಕೊರತೆಯ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>