<p><strong>ಬೆಂಗಳೂರು: </strong>ಶಬರಿಮಲೈ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ನಗರದ ಭಕ್ತರು ಭಾನುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ರಾಮಚಂದ್ರಪುರದ ‘ಪಂದಳರಾಜನ್ ಅಯ್ಯಪ್ಪ ಭಕ್ತಮಂಡಳಿ ಸೇವಾ ಸಂಘ’ ಹಾಗೂ ಕೆ.ಆರ್.ಪುರದ ‘ಕ್ಷೇತ್ರ ಆಚಾರ್ ಸಂರಕ್ಷಣಾ ಸಮಿತಿ‘ ನೇತೃತ್ವದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.</p>.<p>ಕೆ.ಆರ್.ಪುರ, ಮಡಿವಾಳ, ಹೊಸೂರು ರಸ್ತೆ, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ನಡೆಸಿದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತರು, ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ಜೈಕಾರ ಹಾಕಿದರು. ಮಹಿಳೆಯರು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು.</p>.<p>ಸಂಘದ ಮುಖ್ಯಸ್ಥ ಟಿ.ಪರಮಶಿವಂ, ‘ಶಬರಿಮಲೈಯಲ್ಲಿ ಶತಮಾನಗಳಿಂದ ನಡೆದುಕೊಂಡು ಬಂದ ಪದ್ಧತಿ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪು ಭಕ್ತರ ಮನಸ್ಸಿಗೆ ನೋವುಂಟು ಮಾಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಪಂದಳರಾಜ ವಂಶಸ್ಥರಿಂದ ಯಾವುದೇ ಅಭಿಪ್ರಾಯ ಪಡೆಯದೇ ಯಾವುದೋ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯವು ಈ ತೀರ್ಪು ನೀಡಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ತೀರ್ಪು ಮರು ಪರಿಶೀಲನೆಗಾಗಿ ತಿರುವಾಂಕುರ ದೇವಸ್ಥಾನದ ಆಡಳಿತ ಮಂಡಳಿ, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸದಿರುವುದು ಖಂಡನೀಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶಬರಿಮಲೈ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ನಗರದ ಭಕ್ತರು ಭಾನುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ರಾಮಚಂದ್ರಪುರದ ‘ಪಂದಳರಾಜನ್ ಅಯ್ಯಪ್ಪ ಭಕ್ತಮಂಡಳಿ ಸೇವಾ ಸಂಘ’ ಹಾಗೂ ಕೆ.ಆರ್.ಪುರದ ‘ಕ್ಷೇತ್ರ ಆಚಾರ್ ಸಂರಕ್ಷಣಾ ಸಮಿತಿ‘ ನೇತೃತ್ವದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.</p>.<p>ಕೆ.ಆರ್.ಪುರ, ಮಡಿವಾಳ, ಹೊಸೂರು ರಸ್ತೆ, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ನಡೆಸಿದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತರು, ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ಜೈಕಾರ ಹಾಕಿದರು. ಮಹಿಳೆಯರು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು.</p>.<p>ಸಂಘದ ಮುಖ್ಯಸ್ಥ ಟಿ.ಪರಮಶಿವಂ, ‘ಶಬರಿಮಲೈಯಲ್ಲಿ ಶತಮಾನಗಳಿಂದ ನಡೆದುಕೊಂಡು ಬಂದ ಪದ್ಧತಿ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪು ಭಕ್ತರ ಮನಸ್ಸಿಗೆ ನೋವುಂಟು ಮಾಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಪಂದಳರಾಜ ವಂಶಸ್ಥರಿಂದ ಯಾವುದೇ ಅಭಿಪ್ರಾಯ ಪಡೆಯದೇ ಯಾವುದೋ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯವು ಈ ತೀರ್ಪು ನೀಡಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ತೀರ್ಪು ಮರು ಪರಿಶೀಲನೆಗಾಗಿ ತಿರುವಾಂಕುರ ದೇವಸ್ಥಾನದ ಆಡಳಿತ ಮಂಡಳಿ, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸದಿರುವುದು ಖಂಡನೀಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>