<p><strong>ಬೆಂಗಳೂರು</strong>: ಬ್ಯಾಂಕೇತರ ಹಣಕಾಸು ವ್ಯವಹಾರ ನಡೆಸುತ್ತಿರುವ ಕಾರಣ ಉದ್ಯಮಿ ಅಜೀಮ್ ಪ್ರೇಮ್ಜಿ ವಿರುದ್ಧ ತನಿಖೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿರುವ ಹೈಕೊರ್ಟ್, ಪದೇ ಪದೇ ಅರ್ಜಿ ಸಲ್ಲಿಸಿದ ಕಾರಣಕ್ಕೆ ಅರ್ಜಿದಾರರಿಗೆ ₹10 ಲಕ್ಷ ದಂಡ ವಿಧಿಸಿದೆ.</p>.<p>ಇಂಡಿಯನ್ ಅವೇಕ್ ಫಾರ್ ಟ್ರಾನ್ಸ್ಪರೆನ್ಸಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ, ಈ ಆದೇಶ ನೀಡಿದೆ.</p>.<p>ಕಾನೂನು ಬಾಹಿರವಾಗಿ ಬ್ಯಾಂಕೇತರ ಹಣಕಾಸು ವ್ಯವಹಾರ ನಡೆಸಲಾಗುತ್ತಿದೆ. ಆರ್ಬಿಐ ಕಾಯ್ದೆಯಡಿ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದರು. ಈ ಅರ್ಜಿಯನ್ನು ಜನವರಿಯಲ್ಲಿ ಹೈಕೋರ್ಟ್ ವಜಾಗೊಳಿಸಿತ್ತು.</p>.<p>‘ಅರ್ಜಿದಾರರ ದೂರಿಗೆ ಆರ್ಬಿಐ ಕೂಡ 2017ರಲ್ಲಿ ಉತ್ತರ ನೀಡಿದೆ. ಈ ಬಗ್ಗೆ ಬೇರೆ ತಕಾರು ಇದ್ದರೆ ಸೂಕ್ತ ವೇದಿಕೆಯಲ್ಲಿ ಪರಿಹರಿಸಿಕೊಳ್ಳಬಹುದು. ಪದೇ ಪದೇ ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಸಮಯ ವ್ಯರ್ಥ ಮಾಡಲಾಗುತ್ತಿದೆ. ನ್ಯಾಯಾಂಗ ದುರ್ಬಳಕೆ ಮಾಡಲಾಗುತ್ತಿದೆ’ ಎಂದು ಅಭಿಪ್ರಾಯಿಸಿದ ಪೀಠ, ದಂಡ ವಿಧಿಸಿ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬ್ಯಾಂಕೇತರ ಹಣಕಾಸು ವ್ಯವಹಾರ ನಡೆಸುತ್ತಿರುವ ಕಾರಣ ಉದ್ಯಮಿ ಅಜೀಮ್ ಪ್ರೇಮ್ಜಿ ವಿರುದ್ಧ ತನಿಖೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿರುವ ಹೈಕೊರ್ಟ್, ಪದೇ ಪದೇ ಅರ್ಜಿ ಸಲ್ಲಿಸಿದ ಕಾರಣಕ್ಕೆ ಅರ್ಜಿದಾರರಿಗೆ ₹10 ಲಕ್ಷ ದಂಡ ವಿಧಿಸಿದೆ.</p>.<p>ಇಂಡಿಯನ್ ಅವೇಕ್ ಫಾರ್ ಟ್ರಾನ್ಸ್ಪರೆನ್ಸಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ, ಈ ಆದೇಶ ನೀಡಿದೆ.</p>.<p>ಕಾನೂನು ಬಾಹಿರವಾಗಿ ಬ್ಯಾಂಕೇತರ ಹಣಕಾಸು ವ್ಯವಹಾರ ನಡೆಸಲಾಗುತ್ತಿದೆ. ಆರ್ಬಿಐ ಕಾಯ್ದೆಯಡಿ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದರು. ಈ ಅರ್ಜಿಯನ್ನು ಜನವರಿಯಲ್ಲಿ ಹೈಕೋರ್ಟ್ ವಜಾಗೊಳಿಸಿತ್ತು.</p>.<p>‘ಅರ್ಜಿದಾರರ ದೂರಿಗೆ ಆರ್ಬಿಐ ಕೂಡ 2017ರಲ್ಲಿ ಉತ್ತರ ನೀಡಿದೆ. ಈ ಬಗ್ಗೆ ಬೇರೆ ತಕಾರು ಇದ್ದರೆ ಸೂಕ್ತ ವೇದಿಕೆಯಲ್ಲಿ ಪರಿಹರಿಸಿಕೊಳ್ಳಬಹುದು. ಪದೇ ಪದೇ ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಸಮಯ ವ್ಯರ್ಥ ಮಾಡಲಾಗುತ್ತಿದೆ. ನ್ಯಾಯಾಂಗ ದುರ್ಬಳಕೆ ಮಾಡಲಾಗುತ್ತಿದೆ’ ಎಂದು ಅಭಿಪ್ರಾಯಿಸಿದ ಪೀಠ, ದಂಡ ವಿಧಿಸಿ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>