<p>ಬೆಂಗಳೂರು: ಅಜೀಂ ಪ್ರೇಮ್ಜೀ ವಿಶ್ವ ವಿದ್ಯಾಲಯದ ಡೆವಲಪ್ಮೆಂಟ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ, ಮಹಾರಾಷ್ಟ್ರದ ಅಭಿಜಿತ್ (26) ಎಂಬುವವರು ಕಾಲೇಜು ಆವರಣದಲ್ಲಿ ಶುಕ್ರವಾರ ಕುಸಿದು ಬಿದ್ದು ಮೃತಪಟ್ಟಿದ್ದಾರೆ.</p>.<p>ವಿದ್ಯಾರ್ಥಿಗಳ ಆಕ್ರೋಶ: ‘ಹಾಸ್ಟೆಲ್ನಿಂದ ಕಾಲೇಜಿಗೆ ಬರಲು ಕಲ್ಪಿಸಿದ್ದ ಬಸ್ ಶುಲ್ಕ ಹೆಚ್ಚಳವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿ<br />ದ್ದೇವೆ. ವಿ.ವಿಯ ಆಡಳಿತ ಮಂಡಳಿ ಶುಲ್ಕ ಇಳಿಸದ ಕಾರಣಕ್ಕೆ ಪ್ರತಿಭಟನೆ ತೀವ್ರಗೊಳಿಸಿದ್ದೆವು. ಮೂರು ದಿನಗಳಿಂದ<br />ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೆವು. ಈ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಅಭಿಜಿತ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಭಿಜಿತ್<br />ಸಾವಿಗೆ ವಿ.ವಿ ಆಡಳಿತ ಮಂಡಳಿ ನಿರ್ಲಕ್ಷ್ಯವೇ ಕಾರಣ’ ಎಂದು ಪ್ರತಿಭಟನ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.</p>.<p>ವಿ.ವಿ ಸ್ಪಷ್ಟನೆ: ‘ವಿದ್ಯಾರ್ಥಿ ಸಾವು ಪ್ರಕರಣ ದುರದೃಷ್ಟಕರ. ಘಟನೆಯಿಂದ ನಾವೂ ಆಘಾತಕ್ಕೆ ಒಳಗಾಗಿದ್ದೇವೆ. ಶುಕ್ರವಾರ ನಡೆಯುತ್ತಿದ್ದ ವಾರ್ಷಿಕೋತ್ಸವದಲ್ಲಿ ಇತರೆ ವಿದ್ಯಾರ್ಥಿಗಳ ಜತೆಗೆ ಅಭಿಜಿತ್ ನೃತ್ಯ ಪ್ರದರ್ಶಿಸುತ್ತಿದ್ದರು. ಆ ವೇಳೆ ಅಲ್ಲಿಯೇ ಕುಸಿದುಬಿದ್ದಿರು. ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಕೊಡಿಸಿದರೂ ಅವರು ಬದುಕುಳಿಯಲಿಲ್ಲ. ಈ ವಿದ್ಯಾರ್ಥಿ ಗುರುವಾರ ಹಾಗೂ ಶುಕ್ರವಾರ ಯಾವುದೇ ಪ್ರತಿಭಟನೆಯಲ್ಲಿ ಪಾಲ್ಗೊಂಡಿರಲಿಲ್ಲ’ ಎಂದು ವಿ.ವಿ ಅಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.</p>.<p>‘ಬುಧವಾರ ಸಂಜೆಯೇ ಅಭಿಜಿತ್ ಪ್ರತಿಭಟನಾ ಸ್ಥಳದಿಂದ ವಾಪಸ್ ಆಗಿದ್ದರು’ ಎಂದು ತಿಳಿಸಿದೆ.</p>.<p>‘ಕುಸಿದು ಬಿದ್ದ ಬಳಿಕವೇ ಕಾಲೇಜು ವೈದ್ಯರು ಚಿಕಿತ್ಸೆ ನೀಡಿದರು. ಬಳಿಕ ಆಂಬುಲೆನ್ಸ್ನಲ್ಲಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರೂ ಸಾಕಷ್ಟು ಪ್ರಯತ್ನ ಹಾಕಿದರು. ಈ ಘಟನೆಗೂ ಪ್ರತಿಭಟನೆಗೂ ಸಂಬಂಧ ಇಲ್ಲ. ಅಸಮಂಜಸ ಕಾರಣಕ್ಕೆ ಪ್ರತಿಭಟನೆ ನಡೆಯುತ್ತಿದೆ’ ಎಂದು ಸ್ಪಷ್ಟನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಅಜೀಂ ಪ್ರೇಮ್ಜೀ ವಿಶ್ವ ವಿದ್ಯಾಲಯದ ಡೆವಲಪ್ಮೆಂಟ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ, ಮಹಾರಾಷ್ಟ್ರದ ಅಭಿಜಿತ್ (26) ಎಂಬುವವರು ಕಾಲೇಜು ಆವರಣದಲ್ಲಿ ಶುಕ್ರವಾರ ಕುಸಿದು ಬಿದ್ದು ಮೃತಪಟ್ಟಿದ್ದಾರೆ.</p>.<p>ವಿದ್ಯಾರ್ಥಿಗಳ ಆಕ್ರೋಶ: ‘ಹಾಸ್ಟೆಲ್ನಿಂದ ಕಾಲೇಜಿಗೆ ಬರಲು ಕಲ್ಪಿಸಿದ್ದ ಬಸ್ ಶುಲ್ಕ ಹೆಚ್ಚಳವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿ<br />ದ್ದೇವೆ. ವಿ.ವಿಯ ಆಡಳಿತ ಮಂಡಳಿ ಶುಲ್ಕ ಇಳಿಸದ ಕಾರಣಕ್ಕೆ ಪ್ರತಿಭಟನೆ ತೀವ್ರಗೊಳಿಸಿದ್ದೆವು. ಮೂರು ದಿನಗಳಿಂದ<br />ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೆವು. ಈ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಅಭಿಜಿತ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಭಿಜಿತ್<br />ಸಾವಿಗೆ ವಿ.ವಿ ಆಡಳಿತ ಮಂಡಳಿ ನಿರ್ಲಕ್ಷ್ಯವೇ ಕಾರಣ’ ಎಂದು ಪ್ರತಿಭಟನ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.</p>.<p>ವಿ.ವಿ ಸ್ಪಷ್ಟನೆ: ‘ವಿದ್ಯಾರ್ಥಿ ಸಾವು ಪ್ರಕರಣ ದುರದೃಷ್ಟಕರ. ಘಟನೆಯಿಂದ ನಾವೂ ಆಘಾತಕ್ಕೆ ಒಳಗಾಗಿದ್ದೇವೆ. ಶುಕ್ರವಾರ ನಡೆಯುತ್ತಿದ್ದ ವಾರ್ಷಿಕೋತ್ಸವದಲ್ಲಿ ಇತರೆ ವಿದ್ಯಾರ್ಥಿಗಳ ಜತೆಗೆ ಅಭಿಜಿತ್ ನೃತ್ಯ ಪ್ರದರ್ಶಿಸುತ್ತಿದ್ದರು. ಆ ವೇಳೆ ಅಲ್ಲಿಯೇ ಕುಸಿದುಬಿದ್ದಿರು. ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಕೊಡಿಸಿದರೂ ಅವರು ಬದುಕುಳಿಯಲಿಲ್ಲ. ಈ ವಿದ್ಯಾರ್ಥಿ ಗುರುವಾರ ಹಾಗೂ ಶುಕ್ರವಾರ ಯಾವುದೇ ಪ್ರತಿಭಟನೆಯಲ್ಲಿ ಪಾಲ್ಗೊಂಡಿರಲಿಲ್ಲ’ ಎಂದು ವಿ.ವಿ ಅಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.</p>.<p>‘ಬುಧವಾರ ಸಂಜೆಯೇ ಅಭಿಜಿತ್ ಪ್ರತಿಭಟನಾ ಸ್ಥಳದಿಂದ ವಾಪಸ್ ಆಗಿದ್ದರು’ ಎಂದು ತಿಳಿಸಿದೆ.</p>.<p>‘ಕುಸಿದು ಬಿದ್ದ ಬಳಿಕವೇ ಕಾಲೇಜು ವೈದ್ಯರು ಚಿಕಿತ್ಸೆ ನೀಡಿದರು. ಬಳಿಕ ಆಂಬುಲೆನ್ಸ್ನಲ್ಲಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರೂ ಸಾಕಷ್ಟು ಪ್ರಯತ್ನ ಹಾಕಿದರು. ಈ ಘಟನೆಗೂ ಪ್ರತಿಭಟನೆಗೂ ಸಂಬಂಧ ಇಲ್ಲ. ಅಸಮಂಜಸ ಕಾರಣಕ್ಕೆ ಪ್ರತಿಭಟನೆ ನಡೆಯುತ್ತಿದೆ’ ಎಂದು ಸ್ಪಷ್ಟನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>