ವಿದ್ಯಾರ್ಥಿಗಳ ಆಕ್ರೋಶ: ‘ಹಾಸ್ಟೆಲ್ನಿಂದ ಕಾಲೇಜಿಗೆ ಬರಲು ಕಲ್ಪಿಸಿದ್ದ ಬಸ್ ಶುಲ್ಕ ಹೆಚ್ಚಳವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿ
ದ್ದೇವೆ. ವಿ.ವಿಯ ಆಡಳಿತ ಮಂಡಳಿ ಶುಲ್ಕ ಇಳಿಸದ ಕಾರಣಕ್ಕೆ ಪ್ರತಿಭಟನೆ ತೀವ್ರಗೊಳಿಸಿದ್ದೆವು. ಮೂರು ದಿನಗಳಿಂದ
ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೆವು. ಈ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಅಭಿಜಿತ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಭಿಜಿತ್
ಸಾವಿಗೆ ವಿ.ವಿ ಆಡಳಿತ ಮಂಡಳಿ ನಿರ್ಲಕ್ಷ್ಯವೇ ಕಾರಣ’ ಎಂದು ಪ್ರತಿಭಟನ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.