<p><strong>ಬೆಂಗಳೂರು:</strong> ‘ಟಿ.ವಿ ಚಾನೆಲ್ಗಳಲ್ಲಿ ಪ್ರಸಾರವಾಗುವ ಕೆಲವು ಸಂಗೀತ ರಿಯಾಲಿಟಿ ಷೋಗಳಲ್ಲಿ ವಿಜೇತರುಯಾರು ಎಂಬುದುಮೊದಲೇ ನಿರ್ಧಾರವಾಗಿರುತ್ತದೆ’ ಎಂದು ಹಿರಿಯ ಹಿನ್ನೆಲೆ ಗಾಯಕಿ ಬಿ.ಕೆ.ಸುಮಿತ್ರಾ ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಆಯೋಜಿಸಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇಂಥವರೇ ಗೆಲ್ಲಬೇಕು ಎಂದು ಕಾರ್ಯಕ್ರಮದ ಪ್ರಾರಂಭದಲ್ಲಿಯೇ ನಿರ್ಧಾರವಾಗಿರುತ್ತದೆ. ಈಗ ಇಂತಹ ಕಾರ್ಯಕ್ರಮಗಳಿಗೆ ತೀರ್ಪುಗಾರರಾಗಿ ಹೋಗುವುದನ್ನೇ ನಿಲ್ಲಿಸಿದ್ದೇನೆ’ ಎಂದು ತಿಳಿಸಿದರು.</p>.<p>‘ಐದಾರು ಹಾಡು ಕಲಿತು ಇಂತಹ ಕಾರ್ಯಕ್ರಮಗಳಿಗೆ ಬರುತ್ತಾರೆ. ಸ್ವಂತಿಕೆ ಇರುವುದಿಲ್ಲ. ಶಾಸ್ತ್ರೀಯವಾಗಿ ಸಂಗೀತ ಅಭ್ಯಾಸ ಮಾಡಿರುವುದಿಲ್ಲ. ಪ್ರತಿಭಾವಂತರಿದ್ದರೂ ಕೆಲವೊಮ್ಮೆ ಅವರಿಗೆ ಗೆಲುವು ಸಿಗುವುದಿಲ್ಲ. ಜಾತಿ–ಮತ, ಹಿನ್ನೆಲೆ ನೋಡಿ ವಿಜೇತರನ್ನು ಆಯ್ಕೆ ಮಾಡಲಾಗುತ್ತಿದೆ. ಅರ್ಹ ಪ್ರತಿಭಾವಂತರು ಗೆಲ್ಲುವಂತಾಗಬೇಕು’ ಎಂದು ಹೇಳಿದರು.</p>.<p>‘ನಮ್ಮ ಮಗ ಅಥವಾ ಮಗಳು ಒಂದು ಹಾಡು ಹಾಡಲು ಎರಡೂವರೆ ಸಾವಿರ ರೂಪಾಯಿ ಕೊಡುತ್ತೀರಾ ಎಂದು ಪೋಷಕರೇ ಕೇಳುತ್ತಾರೆ. ಇಂತಹ ವಾತಾವರಣದಲ್ಲಿ ಮಕ್ಕಳನ್ನು ಬೆಳೆಸುವುದು ಮುಂದೆ ಪೋಷಕರಿಗೇ ಕಷ್ಟವಾಗಬಹುದು’ ಎಂದು ಸುಮಿತ್ರಾ ಅಭಿಪ್ರಾಯಪಟ್ಟರು.</p>.<p>‘ಶಾಸ್ತ್ರೀಯ ಸಂಗೀತ ಎಲ್ಲದಕ್ಕೂ ಅಡಿಪಾಯ. ಜ್ಯೂನಿಯರ್, ಸೀನಿಯರ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಸಂಗೀತ ಕ್ಷೇತ್ರ ಪ್ರವೇಶಿಸಬೇಕು. ಆಗ ಗಾಯಕರಲ್ಲಿ ಸ್ವಂತಿಕೆ ಬರಲು ಸಾಧ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಟಿ.ವಿ ಚಾನೆಲ್ಗಳಲ್ಲಿ ಪ್ರಸಾರವಾಗುವ ಕೆಲವು ಸಂಗೀತ ರಿಯಾಲಿಟಿ ಷೋಗಳಲ್ಲಿ ವಿಜೇತರುಯಾರು ಎಂಬುದುಮೊದಲೇ ನಿರ್ಧಾರವಾಗಿರುತ್ತದೆ’ ಎಂದು ಹಿರಿಯ ಹಿನ್ನೆಲೆ ಗಾಯಕಿ ಬಿ.ಕೆ.ಸುಮಿತ್ರಾ ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಆಯೋಜಿಸಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇಂಥವರೇ ಗೆಲ್ಲಬೇಕು ಎಂದು ಕಾರ್ಯಕ್ರಮದ ಪ್ರಾರಂಭದಲ್ಲಿಯೇ ನಿರ್ಧಾರವಾಗಿರುತ್ತದೆ. ಈಗ ಇಂತಹ ಕಾರ್ಯಕ್ರಮಗಳಿಗೆ ತೀರ್ಪುಗಾರರಾಗಿ ಹೋಗುವುದನ್ನೇ ನಿಲ್ಲಿಸಿದ್ದೇನೆ’ ಎಂದು ತಿಳಿಸಿದರು.</p>.<p>‘ಐದಾರು ಹಾಡು ಕಲಿತು ಇಂತಹ ಕಾರ್ಯಕ್ರಮಗಳಿಗೆ ಬರುತ್ತಾರೆ. ಸ್ವಂತಿಕೆ ಇರುವುದಿಲ್ಲ. ಶಾಸ್ತ್ರೀಯವಾಗಿ ಸಂಗೀತ ಅಭ್ಯಾಸ ಮಾಡಿರುವುದಿಲ್ಲ. ಪ್ರತಿಭಾವಂತರಿದ್ದರೂ ಕೆಲವೊಮ್ಮೆ ಅವರಿಗೆ ಗೆಲುವು ಸಿಗುವುದಿಲ್ಲ. ಜಾತಿ–ಮತ, ಹಿನ್ನೆಲೆ ನೋಡಿ ವಿಜೇತರನ್ನು ಆಯ್ಕೆ ಮಾಡಲಾಗುತ್ತಿದೆ. ಅರ್ಹ ಪ್ರತಿಭಾವಂತರು ಗೆಲ್ಲುವಂತಾಗಬೇಕು’ ಎಂದು ಹೇಳಿದರು.</p>.<p>‘ನಮ್ಮ ಮಗ ಅಥವಾ ಮಗಳು ಒಂದು ಹಾಡು ಹಾಡಲು ಎರಡೂವರೆ ಸಾವಿರ ರೂಪಾಯಿ ಕೊಡುತ್ತೀರಾ ಎಂದು ಪೋಷಕರೇ ಕೇಳುತ್ತಾರೆ. ಇಂತಹ ವಾತಾವರಣದಲ್ಲಿ ಮಕ್ಕಳನ್ನು ಬೆಳೆಸುವುದು ಮುಂದೆ ಪೋಷಕರಿಗೇ ಕಷ್ಟವಾಗಬಹುದು’ ಎಂದು ಸುಮಿತ್ರಾ ಅಭಿಪ್ರಾಯಪಟ್ಟರು.</p>.<p>‘ಶಾಸ್ತ್ರೀಯ ಸಂಗೀತ ಎಲ್ಲದಕ್ಕೂ ಅಡಿಪಾಯ. ಜ್ಯೂನಿಯರ್, ಸೀನಿಯರ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಸಂಗೀತ ಕ್ಷೇತ್ರ ಪ್ರವೇಶಿಸಬೇಕು. ಆಗ ಗಾಯಕರಲ್ಲಿ ಸ್ವಂತಿಕೆ ಬರಲು ಸಾಧ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>