ಜೆಡಿಎಸ್ನ ಜಿ.ಡಿ. ಹರೀಶ್ ಗೌಡ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಅವರು, ‘ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರೂಪಿಸಿರುವ ಅಕ್ರಮ– ಸಕ್ರಮ ಯೋಜನೆಯನ್ನು ಜಾರಿಗೊಳಿಸಲು 15 ವರ್ಷಗಳಿಂದ ಸಾಧ್ಯವಾಗಿಲ್ಲ. ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ನಲ್ಲಿದೆ. ಆದ್ದರಿಂದ ಬಿ– ಖಾತಾ ನೀಡುವ ಹೊಸ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ’ ಎಂದರು.