ನಿವೃತ್ತ ಪ್ರಾಧ್ಯಾಪಕಿ ಡಿ. ಮಂಗಳಾ ಪ್ರಿಯದರ್ಶಿನಿ ಮಾತನಾಡಿ, ‘ಬೃಹತ್ ಕೃತಿಗಳನ್ನು ಬರೆಯುವುದಕ್ಕಿಂತ ಸಣ್ಣ ಕತೆಗಳನ್ನು ರಚಿಸುವುದು ಕಷ್ಟದ ಕೆಲಸ. ಆದರೆ, ಪ್ರೇಮಾ ಭಟ್ ಅವರು ಕತೆಗಳನ್ನು ಕಲಾತ್ಮಕವಾಗಿ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಿದಾನಂದ ಸಾಲಿ ಅವರು ಕತೆ, ಕವಿತೆ, ಗಜಲ್, ನಾಟಕ, ಸಂಶೋಧನೆ, ವಿಮರ್ಶೆ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೊಡುಗೆ ನೀಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.