ಬಿ.ಎಂ.ಶ್ರೀ. ಪ್ರತಿಷ್ಠಾನ ಹಾಗೂ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ಜಂಟಿಯಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡ ‘ಕುವೆಂಪು-ವರ್ತಮಾನದ ಬೆಳಕಿನಲ್ಲಿ’ ವಿಚಾರಸಂಕಿರಣದಲ್ಲಿ ಭಾಗವಹಿಸಿ, ಮಾತನಾಡಿದರು. ‘ಸಾಹಿತ್ಯವನ್ನು ಮೀರಿದ ವ್ಯಕ್ತಿತ್ವ ಕುವೆಂಪು ಅವರದ್ದಾಗಿದೆ. ಅವರು ಒಂದು ಕ್ಷೇತ್ರಕ್ಕೆ ಸೀಮಿತವಾಗದೆ, ಭಾಷೆ, ಸಾಹಿತ್ಯ, ವಿಮರ್ಶೆ, ಮೀಮಾಂಸೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದ್ದಾರೆ. ಅವರ ಬರವಣಿಗೆಯಲ್ಲಿ ಸ್ಥಳೀಯತೆಯ ಜತೆಗೆ ರಾಷ್ಟ್ರೀಯತೆ ಹಾಗೂ ಅಂತರರಾಷ್ಟ್ರೀಯತೆಯೂ ಅಡಗಿದೆ’ ಎಂದು ಹೇಳಿದರು.