ದೇವೇಗೌಡರ ಹೇಳಿಕೆ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸುನಾಮಿಯಿಂದ ದೇವೇಗೌಡರು ಹೆದರಿದ್ದಾರೆ. ಈ ಕಾರಣದಿಂದ ಬಿಜೆಪಿಯಲ್ಲಿ ವಿಲೀನವಾಗಿದ್ದಾರೆ. ಬಿಜೆಪಿ ಜತೆಗಿನ ಮೈತ್ರಿಯಿಂದ ತಮಗೆ ಆನೆ ಬಲ ಬಂದಿದೆ ಎಂಬ ಭ್ರಮೆಯಲ್ಲಿ ದೃತರಾಷ್ಟ್ರನ ಅಂಧ ಪ್ರೇಮವನ್ನು ವ್ಯಕ್ತಪಡಿಸುತ್ತಿದ್ದಾರೆ’ ಎಂದಿದ್ದಾರೆ.