‘ರಾಯಚೂರು ಜಿಲ್ಲಾ ನ್ಯಾಯಾಧೀಶರಾಗಿದ್ದವರುಜ.26 ರಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸುವ ಮೂಲಕ ಅಗೌರವ ತೋರಿಸಿದ್ದಾರೆ ಎಂಬ ಅಪಾದನೆಯಿದೆ. ಇದನ್ನು ಇಡೀ ರಾಜ್ಯವೇ ಖಂಡಿಸಿದೆ. ಈ ಪ್ರತಿಭಟನೆಗಳ ಪರಾಕಾಷ್ಠೆಯಾಗಿ ಸಾವಿರಾರು ಜನರು ಬೆಂಗಳೂರಿಗೂ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿ ಆಕ್ರೋಶ ತಿಳಿಸಿದ್ದಾರೆ. ಮನವಿ ಸ್ವೀಕರಿಸಿರುವ ಮುಖ್ಯಮಂತ್ರಿ ಅವರು ಸೂಕ್ತ ಕ್ರಮದ ಭರವಸೆ ನಿಡಿರುವುದು ಸ್ವಾಗತಾರ್ಹ. ಆದರೆ, ತಕ್ಷಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.