ಬೆಂಗಳೂರು: ರೈಲಿಗೆ ತಲೆಕೊಟ್ಟು ಬಿ.ಟೆಕ್ ಪದವೀಧರ ಸುನೀಲ್ ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಅರವಂತಿಕೆ ಪಾಳ್ಯ ನಿವಾಸಿ ಸುನೀಲ್ ಕುಮಾರ್, ಇತ್ತೀಚೆಗಷ್ಟೇ ಬಿ.ಟೆಕ್ ಪದವಿ ಮುಗಿಸಿದ್ದರು. ಎಂ.ಟೆಕ್ ಪದವಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದರು’ ಎಂದು ರೈಲ್ವೆ ಪೊಲೀಸ್ ಮೂಲಗಳು ಹೇಳಿವೆ.
’ಕೊರೊನಾ ಸೋಂಕಿತರಾಗಿದ್ದ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮಾನಸಿಕವಾಗಿ ನೊಂದಿದ್ದರು. ವಾಯುವಿಹಾರಕ್ಕೆ ಹೋಗುವುದಾಗಿ ಹೇಳಿ ಶುಕ್ರವಾರ ಸಂಜೆ ಮನೆಯಿಂದ ಹೊರಬಂದಿದ್ದರು. ಮನೆಯ ಸಮೀಪದಲ್ಲಿರುವ ಹಳಿ ಬಳಿ ಹೋಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದೂ ಪೊಲೀಸರು ತಿಳಿಸಿದ್ದಾರೆ.