ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ರಾತ್ರಿ ನಡೆದ ಸಭೆಯಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಕೂಡ ಇದ್ದರು. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್ ಸ್ಪರ್ಧಿಸುವುದನ್ನು ವಿರೋಧಿಸಿದ್ದ ಪ್ರೀತಂ ಗೌಡ, ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು. ವೈಮನಸ್ಸು ಮರೆತು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗುವಂತೆ ಪ್ರೀತಂ ಅವರನ್ನು ಮನವೊಲಿಸಲು ವಿಜಯೇಂದ್ರ ಪ್ರಯತ್ನಿಸಿದರು.