<p><strong>ಹೆಸರಘಟ್ಟ: </strong>ಗೋಪಾಲಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 2024- 25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ, 16 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.</p>.<p>ಗರ್ಭಿಣಿಯರಿಗೆ ಮಡಿಲು ತುಂಬಿ, ಹೊಸಕೆ ಶಾಸ್ತ್ರ, ಆರತಿ ಮಾಡಿ ಸೀಮಂತ ಕಾರ್ಯ ನೆರವೇರಿಸಲಾಯಿತು.</p>.<p>‘ಸಂಘದ ಬಂಡವಾಳದಿಂದ ಆಭರಣ ಸಾಲ, ಅಡಮಾನ ಸಾಲ, ವ್ಯಾಪಾರ ಸಾಲ ನೀಡಲಾಗಿದೆ ರೈತರು ಮತ್ತು ಸ್ತ್ರೀ ಶಕ್ತಿ ಸಂಘಗಳು ಸಂಘದ ವತಿಯಿಂದ ದೊರೆಯುವ ಸಾಲ ಸೌಲಭ್ಯಗಳನ್ನು ಪಡೆಯಬೇಕು’ ಎಂದು ಸಂಘದ ಅಧ್ಯಕ್ಷ ವಿ.ರಾಮಸ್ವಾಮಿ ಹೇಳಿದರು.</p>.<p>2024- 25 ನೇ ಸಾಲಿನ ವಾರ್ಷಿಕ ಮಹಾಸಭೆಯ ನಡವಳಿಗಳು, ಲೆಕ್ಕಪರಿಶೋಧನಾ ವರದಿ, 2025- 26ನೇ ಸಾಲಿನ ಆಯವ್ಯಯ ಇನ್ನಿತರ ವಿಷಯಗಳನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೈಲಮೂರ್ತಿ ಜಿ. ಸಭೆಯಲ್ಲಿ ಮಂಡಿಸಿದರು.</p>.<p>ಹಿತಚಿಂತನಾ ಚಾರಿಟಬಲ್ ಟ್ರಸ್ಟ್ ಮತ್ತು ರಕ್ಷಾ ಚಾರಿಟಬಲ್ ಟ್ರಸ್ಟ್ ಹಾಗೂ ಅಕ್ಷಯ್ ಐ ಕೇರ್ ಸಹಭಾಗಿತ್ವದಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು. ಡಾ. ಮಂಜುನಾಥ್ ಮತ್ತು ಡಾ. ಟಿ.ಎಸ್.ಸ್ವಾಮಿ ರೋಗಿಗಳ ತಪಾಸಣೆ ನಡೆಸಿದರು.</p>.<p>ಸಂಘಕ್ಕೆ ಎರಡು ನಿವೇಶನ ದಾನ ನೀಡಿದಂತಹ ನಾಗರಾಜ್ ರಾವ್ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ಎಸ್ಎಸ್ಎಲ್ ಮತ್ತು ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಸಂಘದ ಉಪಾಧ್ಯಕ್ಷ ಜಿ. ಕೆಂಪರಾಜು, ಹಿತಚಿಂತನಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಪುಟ್ಟಮ್ಮ ವೆಂಕಟರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಮಹಾನಂದ ಕುಂಬಾರ್ ಸಂಘದ ನಿರ್ದೇಶಕರಾದ ರಾಜಗೋಪಾಲ್, ಮಹಾದೇವಯ್ಯ, ಜಯಮ್ಮ, ಜಯಲಕ್ಷ್ಮಿ, ಗೋಪಾಲಕೃಷ್ಣ ಟಿ ಸಿ,ರಾಮಾಂಜನೇಯ, ಭಾಗ್ಯಮ್ಮ ನಾಗರತ್ನಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ: </strong>ಗೋಪಾಲಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 2024- 25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ, 16 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.</p>.<p>ಗರ್ಭಿಣಿಯರಿಗೆ ಮಡಿಲು ತುಂಬಿ, ಹೊಸಕೆ ಶಾಸ್ತ್ರ, ಆರತಿ ಮಾಡಿ ಸೀಮಂತ ಕಾರ್ಯ ನೆರವೇರಿಸಲಾಯಿತು.</p>.<p>‘ಸಂಘದ ಬಂಡವಾಳದಿಂದ ಆಭರಣ ಸಾಲ, ಅಡಮಾನ ಸಾಲ, ವ್ಯಾಪಾರ ಸಾಲ ನೀಡಲಾಗಿದೆ ರೈತರು ಮತ್ತು ಸ್ತ್ರೀ ಶಕ್ತಿ ಸಂಘಗಳು ಸಂಘದ ವತಿಯಿಂದ ದೊರೆಯುವ ಸಾಲ ಸೌಲಭ್ಯಗಳನ್ನು ಪಡೆಯಬೇಕು’ ಎಂದು ಸಂಘದ ಅಧ್ಯಕ್ಷ ವಿ.ರಾಮಸ್ವಾಮಿ ಹೇಳಿದರು.</p>.<p>2024- 25 ನೇ ಸಾಲಿನ ವಾರ್ಷಿಕ ಮಹಾಸಭೆಯ ನಡವಳಿಗಳು, ಲೆಕ್ಕಪರಿಶೋಧನಾ ವರದಿ, 2025- 26ನೇ ಸಾಲಿನ ಆಯವ್ಯಯ ಇನ್ನಿತರ ವಿಷಯಗಳನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೈಲಮೂರ್ತಿ ಜಿ. ಸಭೆಯಲ್ಲಿ ಮಂಡಿಸಿದರು.</p>.<p>ಹಿತಚಿಂತನಾ ಚಾರಿಟಬಲ್ ಟ್ರಸ್ಟ್ ಮತ್ತು ರಕ್ಷಾ ಚಾರಿಟಬಲ್ ಟ್ರಸ್ಟ್ ಹಾಗೂ ಅಕ್ಷಯ್ ಐ ಕೇರ್ ಸಹಭಾಗಿತ್ವದಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು. ಡಾ. ಮಂಜುನಾಥ್ ಮತ್ತು ಡಾ. ಟಿ.ಎಸ್.ಸ್ವಾಮಿ ರೋಗಿಗಳ ತಪಾಸಣೆ ನಡೆಸಿದರು.</p>.<p>ಸಂಘಕ್ಕೆ ಎರಡು ನಿವೇಶನ ದಾನ ನೀಡಿದಂತಹ ನಾಗರಾಜ್ ರಾವ್ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ಎಸ್ಎಸ್ಎಲ್ ಮತ್ತು ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಸಂಘದ ಉಪಾಧ್ಯಕ್ಷ ಜಿ. ಕೆಂಪರಾಜು, ಹಿತಚಿಂತನಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಪುಟ್ಟಮ್ಮ ವೆಂಕಟರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಮಹಾನಂದ ಕುಂಬಾರ್ ಸಂಘದ ನಿರ್ದೇಶಕರಾದ ರಾಜಗೋಪಾಲ್, ಮಹಾದೇವಯ್ಯ, ಜಯಮ್ಮ, ಜಯಲಕ್ಷ್ಮಿ, ಗೋಪಾಲಕೃಷ್ಣ ಟಿ ಸಿ,ರಾಮಾಂಜನೇಯ, ಭಾಗ್ಯಮ್ಮ ನಾಗರತ್ನಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>