ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ಮೂವರು ಆರೋಪಿಗಳನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರವೀಣ್ (23), ಸಾಗರ್ (20) ಹಾಗೂ ಮಹೇಂದ್ರ (20) ಬಂಧಿತರು. ಅವರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
‘ಆರೋಪಿಗಳು ವಿಜಯಲಕ್ಷ್ಮಿ ಬಡಾವಣೆಯಲ್ಲಿ ದರೋಡೆ ನಡೆಸಲು ಸಿದ್ಧತೆ ನಡೆಸಿದ್ದರು. ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿದ್ದ ಕುರಿತು ಮಾಹಿತಿ ಲಭ್ಯವಾದ ತಕ್ಷಣ ದಾಳಿ ನಡೆಸಿ ಬಂಧಿಸಲಾಗಿದೆ. ಜಾನ್ ಪೀಟರ್ ಹಾಗೂ ಪ್ರಶಾಂತ್ ಎಂಬುವರು ತಪ್ಪಿಸಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.