<p><strong>ಬೆಂಗಳೂರು</strong>: ‘ಗ್ರಂಥಾಲಯಕ್ಕೆ ಪುಸ್ತಕಗಳನ್ನು ಖರೀದಿಸುವುದು ಅತ್ಯಂತ ಅವಶ್ಯಕ. ಆದರೆ ಅದನ್ನು ಅರ್ಥಪೂರ್ಣಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕೇ ಹೊರತು ಖರೀದಿ ಯೋಜನೆ ನಿಲ್ಲುವಂತಾಗಬಾರದು’ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುಸ್ತಕ ಆಯ್ಕೆ ಸಮಿತಿಯ ಅಧ್ಯಕ್ಷ ಕರೀಗೌಡ ಬೀಚನಹಳ್ಳಿ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಬಹುರೂಪಿ ಪ್ರಕಾಶನ ಹಮ್ಮಿಕೊಂಡಿದ್ದ ಪ್ರಕಾಶನ ರಂಗದ ಬಗೆಗಿನ ಒಂದು ದಿನದ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಗ್ರಂಥಾಲಯ ಇಲಾಖೆಯಲ್ಲಿನ ಪುಸ್ತಕಗಳ ಖರೀದಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಸೂಕ್ತ ಕ್ರಮ ಖಂಡಿತ ಅಗತ್ಯ’ . ಪುಸ್ತಕ ಲೋಕದಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಉತ್ತಮ ಅಭಿರುಚಿಯ ಪ್ರಕಾಶಕರ ಸಂಖ್ಯೆ ಹೆಚ್ಚುತ್ತಾ ಹೋದಷ್ಟೂ ಪ್ರಕಾಶನ ರಂಗ ವ್ಯವಸಾಯಿ ರೂಪ ಪಡೆದುಕೊಳ್ಳುತ್ತದೆ ಎಂದರು. <br><br> ಕಾರ್ಯಕ್ರಮ ಉದ್ಘಾಟಿಸಿದ ಗಾಂಧಿ ಸ್ಮಾರಕ ನಿಧಿಯ ಎಚ್.ಬಿ ದಿನೇಶ್, ‘ಬಹುಮಾಧ್ಯಮದ ಈ ಕಾಲದಲ್ಲಿ ಪುಸ್ತಕ ಪ್ರೀತಿ ನಿರಂತರವಾಗಿ ಇರುವಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕಾರ್ಯಾಗಾರದಲ್ಲಿ ಆಂಧ್ರ ಪ್ರದೇಶ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ತೇಜಸ್ವಿ ಕಟ್ಟಿಮನಿ, ಕಲಾವಿದ ಗುಜ್ಜಾರ್, ಮಕ್ಕಳ ಪುಸ್ತಕ ಪರಿಚಾರಕರಾದ ಲಕ್ಷ್ಮಿ ಕರುಣಾಕರನ್, ವಿವೇಕ್ ಬಿ.ಜಿ, ಹೇಮಾ ಖುರ್ಸಾಪೂರ ಅವರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗ್ರಂಥಾಲಯಕ್ಕೆ ಪುಸ್ತಕಗಳನ್ನು ಖರೀದಿಸುವುದು ಅತ್ಯಂತ ಅವಶ್ಯಕ. ಆದರೆ ಅದನ್ನು ಅರ್ಥಪೂರ್ಣಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕೇ ಹೊರತು ಖರೀದಿ ಯೋಜನೆ ನಿಲ್ಲುವಂತಾಗಬಾರದು’ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುಸ್ತಕ ಆಯ್ಕೆ ಸಮಿತಿಯ ಅಧ್ಯಕ್ಷ ಕರೀಗೌಡ ಬೀಚನಹಳ್ಳಿ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಬಹುರೂಪಿ ಪ್ರಕಾಶನ ಹಮ್ಮಿಕೊಂಡಿದ್ದ ಪ್ರಕಾಶನ ರಂಗದ ಬಗೆಗಿನ ಒಂದು ದಿನದ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಗ್ರಂಥಾಲಯ ಇಲಾಖೆಯಲ್ಲಿನ ಪುಸ್ತಕಗಳ ಖರೀದಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಸೂಕ್ತ ಕ್ರಮ ಖಂಡಿತ ಅಗತ್ಯ’ . ಪುಸ್ತಕ ಲೋಕದಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಉತ್ತಮ ಅಭಿರುಚಿಯ ಪ್ರಕಾಶಕರ ಸಂಖ್ಯೆ ಹೆಚ್ಚುತ್ತಾ ಹೋದಷ್ಟೂ ಪ್ರಕಾಶನ ರಂಗ ವ್ಯವಸಾಯಿ ರೂಪ ಪಡೆದುಕೊಳ್ಳುತ್ತದೆ ಎಂದರು. <br><br> ಕಾರ್ಯಕ್ರಮ ಉದ್ಘಾಟಿಸಿದ ಗಾಂಧಿ ಸ್ಮಾರಕ ನಿಧಿಯ ಎಚ್.ಬಿ ದಿನೇಶ್, ‘ಬಹುಮಾಧ್ಯಮದ ಈ ಕಾಲದಲ್ಲಿ ಪುಸ್ತಕ ಪ್ರೀತಿ ನಿರಂತರವಾಗಿ ಇರುವಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕಾರ್ಯಾಗಾರದಲ್ಲಿ ಆಂಧ್ರ ಪ್ರದೇಶ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ತೇಜಸ್ವಿ ಕಟ್ಟಿಮನಿ, ಕಲಾವಿದ ಗುಜ್ಜಾರ್, ಮಕ್ಕಳ ಪುಸ್ತಕ ಪರಿಚಾರಕರಾದ ಲಕ್ಷ್ಮಿ ಕರುಣಾಕರನ್, ವಿವೇಕ್ ಬಿ.ಜಿ, ಹೇಮಾ ಖುರ್ಸಾಪೂರ ಅವರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>