<p><strong>ಬೆಂಗಳೂರು:</strong> ಆದಾಯಕ್ಕಿಂತ ಹೆಚ್ಚು ಅಸ್ತಿ ಹೊಂದಿರುವ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೆ.ಆರ್. ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.</p>.<p>ಲೋಕಾಯುಕ್ತ ಪೊಲೀಸರು ಜೂನ್ 28ರಂದು ಅಜಿತ್ ರೈ ಮನೆ ಮೇಲೆ ದಾಳಿಮಾಡಿ ಶೋಧ ನಡೆಸಿದ್ದರು. ವಿಚಾರಣೆಗೆ ಸಹಕರಿಸದ ಆರೋಪದ ಮೇಲೆ ಜೂನ್ 29ರಂದು ಬಂಧಿಸಲಾಗಿತ್ತು. ವಿಚಾರಣೆಗಾಗಿ ಕೆಲವು ದಿನಗಳ ಕಾಲ ತನಿಖಾ ತಂಡದ ವಶಕ್ಕೆ ನೀಡಲಾಗಿತ್ತು. ನಂತರ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<p>ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಅಜಿತ್ ರೈ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಆಕ್ಷೇಪಣೆ ಸಲ್ಲಿಸಿದ್ದ ಲೋಕಾಯುಕ್ತ ಪೊಲೀಸರು, ‘ಆರೋಪಿ ವಿರುದ್ಧ ತನಿಖೆ ಬಾಕಿ ಇದೆ. ಬಹಳಷ್ಟು ದಿನಗಳ ಕಾಲ ತನಿಖೆ ನಡೆಯಬೇಕಿದೆ. ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಯುತ್ತಿದೆ. ಈ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡಿದರೆ ತನಿಖೆಗೆ ಹಿನ್ನಡೆ ಆಗುವ ಅಪಾಯವಿದೆ’ ಎಂದು ಜಾಮೀನು ನೀಡುವುದನ್ನು ಬಲವಾಗಿ ವಿರೋಧಿಸಿದ್ದರು.</p>.<p>ಅರ್ಜಿದಾರರ ಪರ ವಕೀಲರು ಮತ್ತು ಲೋಕಾಯುಕ್ತ ಪೊಲೀಸರ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ವಾದಗಳನ್ನು ಆಲಿಸಿದ್ದ ನ್ಯಾಯಾಧೀಶ ಎಸ್.ವಿ. ಶ್ರೀಕಾಂತ್ ಆದೇಶ ಕಾಯ್ದಿರಿಸಿದ್ದರು. ಶುಕ್ರವಾರ ಆದೇಶ ಪ್ರಕಟಿಸಿದ್ದು, ಜಾಮೀನು ಕೋರಿ ಅಜಿತ್ ರೈ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಿರುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆದಾಯಕ್ಕಿಂತ ಹೆಚ್ಚು ಅಸ್ತಿ ಹೊಂದಿರುವ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೆ.ಆರ್. ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.</p>.<p>ಲೋಕಾಯುಕ್ತ ಪೊಲೀಸರು ಜೂನ್ 28ರಂದು ಅಜಿತ್ ರೈ ಮನೆ ಮೇಲೆ ದಾಳಿಮಾಡಿ ಶೋಧ ನಡೆಸಿದ್ದರು. ವಿಚಾರಣೆಗೆ ಸಹಕರಿಸದ ಆರೋಪದ ಮೇಲೆ ಜೂನ್ 29ರಂದು ಬಂಧಿಸಲಾಗಿತ್ತು. ವಿಚಾರಣೆಗಾಗಿ ಕೆಲವು ದಿನಗಳ ಕಾಲ ತನಿಖಾ ತಂಡದ ವಶಕ್ಕೆ ನೀಡಲಾಗಿತ್ತು. ನಂತರ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<p>ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಅಜಿತ್ ರೈ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಆಕ್ಷೇಪಣೆ ಸಲ್ಲಿಸಿದ್ದ ಲೋಕಾಯುಕ್ತ ಪೊಲೀಸರು, ‘ಆರೋಪಿ ವಿರುದ್ಧ ತನಿಖೆ ಬಾಕಿ ಇದೆ. ಬಹಳಷ್ಟು ದಿನಗಳ ಕಾಲ ತನಿಖೆ ನಡೆಯಬೇಕಿದೆ. ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಯುತ್ತಿದೆ. ಈ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡಿದರೆ ತನಿಖೆಗೆ ಹಿನ್ನಡೆ ಆಗುವ ಅಪಾಯವಿದೆ’ ಎಂದು ಜಾಮೀನು ನೀಡುವುದನ್ನು ಬಲವಾಗಿ ವಿರೋಧಿಸಿದ್ದರು.</p>.<p>ಅರ್ಜಿದಾರರ ಪರ ವಕೀಲರು ಮತ್ತು ಲೋಕಾಯುಕ್ತ ಪೊಲೀಸರ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ವಾದಗಳನ್ನು ಆಲಿಸಿದ್ದ ನ್ಯಾಯಾಧೀಶ ಎಸ್.ವಿ. ಶ್ರೀಕಾಂತ್ ಆದೇಶ ಕಾಯ್ದಿರಿಸಿದ್ದರು. ಶುಕ್ರವಾರ ಆದೇಶ ಪ್ರಕಟಿಸಿದ್ದು, ಜಾಮೀನು ಕೋರಿ ಅಜಿತ್ ರೈ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಿರುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>