<p><strong>ಬೆಂಗಳೂರು: </strong>ಡಿ.ಜೆ.ಹಳ್ಳಿ ಗಲಭೆಯ ಆರೋಪಿ ಮೊಹಮ್ಮದ್ ಜಮೀಲ್ಗೆ ಹೈಕೋರ್ಟ್ ಜಾಮೀನು ನೀಡಿದೆ.</p>.<p>ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಿಗರೊಬ್ಬರ ಹೇಳಿಕೆ ಆಧರಿಸಿ ಎಳನೀರು ವ್ಯಾಪಾರಿ ಜಮೀಲ್ ಅವರನ್ನು ಪೊಲೀಸರು 2020 ಆಗಸ್ಟ್ 19ರಂದು ಬಂಧಿಸಿದ್ದರು.</p>.<p>ಫೇಸ್ಬುಕ್ ಸಂದೇಶದಿಂದ ಪ್ರಚೋದನೆಗೊಂಡು ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಗುಂಪು ಬೆಂಕಿ ಹಚ್ಚಿತ್ತು. ಹಿಂಸಾಚಾರ ಪ್ರಕರಣದಲ್ಲಿ ಜಮೀಲ್ 29ನೇ ಆರೋಪಿ ಎಂದು ಹೆಸರಿಸಲಾಗಿತ್ತು.</p>.<p>ಜಾಮೀನು ಕೋರಿ ಜಮೀಲ್ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರಗೊಂಡಿತ್ತು. ಬಳಿಕ ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅರ್ಜಿ ವಿಚಾರಣೆ ನಡೆಸಿದರು.</p>.<p>ಶಾಸಕರ ಮನೆಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಜಮೀಲ್ ಭಾಗಿಯಾಗಿರುವುದಕ್ಕೆ ಯಾವುದೇ ಪುರಾವೆ ಇಲ್ಲ. ಸಿಸಿಟಿವಿ ಕ್ಯಾಮೆರಾ ದೃಶ್ಯ ಮತ್ತು ವಿಡಿಯೊ ತುಣುಕುಗಳಲ್ಲೂ ಜಮೀಲ್ ಕಾಣಿಸುತ್ತಿಲ್ಲ ಎಂಬುದನ್ನು ಪೀಠ ಗಮನಿಸಿತು.</p>.<p>ಜಾಮೀನು ಮಂಜೂರು ಮಾಡಿದ ಪೀಠ, ₹1 ಲಕ್ಷ ಮೌಲ್ಯದ ಬಾಂಡ್ ಜೊತೆಗೆ ಇಬ್ಬರ ಶ್ಯೂರಿಟಿ ನೀಡಬೇಕು. ಅಗತ್ಯವಿದ್ದಾಗ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಡಿ.ಜೆ.ಹಳ್ಳಿ ಗಲಭೆಯ ಆರೋಪಿ ಮೊಹಮ್ಮದ್ ಜಮೀಲ್ಗೆ ಹೈಕೋರ್ಟ್ ಜಾಮೀನು ನೀಡಿದೆ.</p>.<p>ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಿಗರೊಬ್ಬರ ಹೇಳಿಕೆ ಆಧರಿಸಿ ಎಳನೀರು ವ್ಯಾಪಾರಿ ಜಮೀಲ್ ಅವರನ್ನು ಪೊಲೀಸರು 2020 ಆಗಸ್ಟ್ 19ರಂದು ಬಂಧಿಸಿದ್ದರು.</p>.<p>ಫೇಸ್ಬುಕ್ ಸಂದೇಶದಿಂದ ಪ್ರಚೋದನೆಗೊಂಡು ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಗುಂಪು ಬೆಂಕಿ ಹಚ್ಚಿತ್ತು. ಹಿಂಸಾಚಾರ ಪ್ರಕರಣದಲ್ಲಿ ಜಮೀಲ್ 29ನೇ ಆರೋಪಿ ಎಂದು ಹೆಸರಿಸಲಾಗಿತ್ತು.</p>.<p>ಜಾಮೀನು ಕೋರಿ ಜಮೀಲ್ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರಗೊಂಡಿತ್ತು. ಬಳಿಕ ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅರ್ಜಿ ವಿಚಾರಣೆ ನಡೆಸಿದರು.</p>.<p>ಶಾಸಕರ ಮನೆಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಜಮೀಲ್ ಭಾಗಿಯಾಗಿರುವುದಕ್ಕೆ ಯಾವುದೇ ಪುರಾವೆ ಇಲ್ಲ. ಸಿಸಿಟಿವಿ ಕ್ಯಾಮೆರಾ ದೃಶ್ಯ ಮತ್ತು ವಿಡಿಯೊ ತುಣುಕುಗಳಲ್ಲೂ ಜಮೀಲ್ ಕಾಣಿಸುತ್ತಿಲ್ಲ ಎಂಬುದನ್ನು ಪೀಠ ಗಮನಿಸಿತು.</p>.<p>ಜಾಮೀನು ಮಂಜೂರು ಮಾಡಿದ ಪೀಠ, ₹1 ಲಕ್ಷ ಮೌಲ್ಯದ ಬಾಂಡ್ ಜೊತೆಗೆ ಇಬ್ಬರ ಶ್ಯೂರಿಟಿ ನೀಡಬೇಕು. ಅಗತ್ಯವಿದ್ದಾಗ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>