ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಜೆ.ಹಳ್ಳಿ ಗಲಭೆ ಆರೋಪಿಗೆ ಜಾಮೀನು

Last Updated 19 ಮಾರ್ಚ್ 2021, 17:04 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ಜೆ.ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದಬಿಬಿಎಂಪಿ ಮಾಜಿ ಮೇಯರ್ ಸಂಪತ್‌ರಾಜ್ ಅವರ ಹಿಂಬಾಲಕ ಎಸ್.ಸಂತೋಷ್‌ಕುಮಾರ್‌ಗೆ ಹೈಕೋರ್ಟ್ ಜಾಮೀನು ನೀಡಿದೆ.

‘₹5 ಲಕ್ಷ ಮೌಲ್ಯದ ಬಾಂಡ್ ಜತೆಗೆ ಇಬ್ಬರ ಶ್ಯೂರಿಟಿ ನೀಡಬೇಕು. ಈ ರೀತಿಯ ಚಟುವಟಿಕೆಗಳನ್ನು ಭಾಗಿಯಾಗಬಾರದು, ನಿಯಮಿತವಾಗಿ ವಿಚಾರಣೆಗೆ ಹಾಜರಾಗಬೇಕು’ ಎಂದು ಜಾನ್‌ ಮೈಕಲ್ ಕುನ್ಹಾ ಅವರಿದ್ದ ಪೀಠ ನಿರ್ದೇಶನ ನೀಡಿತು.

‘ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವ ಕಾರಣ ಅವರ ವಿರುದ್ಧ ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆ ಜಾರಿಗಳಿಸಲು ಆಗುವುದಿಲ್ಲ. ಅವರು ಗಲಭೆ ಮಾಡಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಪುರಾವೆಗಳಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.

2020 ನವೆಂಬರ್‌ನಲ್ಲಿ ಸಂತೋಷ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು. ಆ ಸಂದರ್ಭದಲ್ಲಿ ಸಂಪತ್ ರಾಜ್ ತಲೆಮರೆಸಿಕೊಂಡಿದ್ದ ಕಾರಣಕ್ಕೆ ಜಾಮೀನು ನೀಡಿರಲಿಲ್ಲ. ಶರಣಾದ ಸಂಪತ್ ರಾಜ್ ಮತ್ತು ಇತರ ಇಬ್ಬರು ಆರೋಪಿಗಳು ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. 2020 ಆಗಸ್ಟ್ 25ರಂದು ಸಂತೋಷ್ ಬಂಧನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT