<p><strong>ಬೆಂಗಳೂರು:</strong> ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಗೆ ಬೆಂಗಳೂರು ವಿಶೇಷ ಆರ್ಥಿಕ ಅಪರಾಧ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ.</p>.<p>ನ್ಯಾಯಾಧೀಶ ವಿಶ್ವನಾಥ್ ಚನ್ನಬಸಪ್ಪ ಗೌಡರ್ ಅವರು ರನ್ಯಾ ಪರ ವಕೀಲರು ಮತ್ತು ಡಿಆರ್ಐ ವಕೀಲರ ವಾದಗಳನ್ನು ಆಲಿಸಿದ ನಂತರ ಈ ಆದೇಶವನ್ನು ಹೊರಡಿಸಿದ್ದಾರೆ. ಹಾಗಾಗಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ರನ್ಯಾ ಇರಲಿದ್ದಾರೆ.</p>.<p>ಜಾಮೀನು ಅರ್ಜಿ ವಿರೋಧಿಸಿದ ಡಿಆರ್ಐ, ಈ ಪ್ರಕರಣವು ‘ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ’ ಮತ್ತು ರನ್ಯಾ ತನಿಖೆಗೆ ಸಹಕರಿಸಿಲ್ಲ ಎಂದು ಮಾಹಿತಿ ನೀಡಿತು.</p>.<p>ಇದೇ ವೇಳೆ, ಪ್ರಕರಣದ ಎರಡನೇ ಆರೋಪಿ ತರುಣ್ ರಾಜುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.</p>.<p>ಜಾಮೀನು ಕೋರಿ ತರುಣ್ ರಾಜು, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತರುಣ್ ರಾಜು ಮನವಿಗೆ ಆಕ್ಷೇಪಣೆ ಸಲ್ಲಿಸಲು ಡಿಆರ್ಐ ಪರ ವಕೀಲರು ಕಾಲಾವಕಾಶ ಕೇಳಿರುವುದರಿಂದ ಅರ್ಜಿ ವಿಚಾರಣೆಯನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿ, ಆಕ್ಷೇಪಣೆ ಸಲ್ಲಿಸುವಂತೆ ಡಿಆರ್ಐ ಅಧಿಕಾರಿಗಳಿಗೆ ಸೂಚಿಸಿದೆ.</p>.ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ED ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಗೆ ಬೆಂಗಳೂರು ವಿಶೇಷ ಆರ್ಥಿಕ ಅಪರಾಧ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ.</p>.<p>ನ್ಯಾಯಾಧೀಶ ವಿಶ್ವನಾಥ್ ಚನ್ನಬಸಪ್ಪ ಗೌಡರ್ ಅವರು ರನ್ಯಾ ಪರ ವಕೀಲರು ಮತ್ತು ಡಿಆರ್ಐ ವಕೀಲರ ವಾದಗಳನ್ನು ಆಲಿಸಿದ ನಂತರ ಈ ಆದೇಶವನ್ನು ಹೊರಡಿಸಿದ್ದಾರೆ. ಹಾಗಾಗಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ರನ್ಯಾ ಇರಲಿದ್ದಾರೆ.</p>.<p>ಜಾಮೀನು ಅರ್ಜಿ ವಿರೋಧಿಸಿದ ಡಿಆರ್ಐ, ಈ ಪ್ರಕರಣವು ‘ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ’ ಮತ್ತು ರನ್ಯಾ ತನಿಖೆಗೆ ಸಹಕರಿಸಿಲ್ಲ ಎಂದು ಮಾಹಿತಿ ನೀಡಿತು.</p>.<p>ಇದೇ ವೇಳೆ, ಪ್ರಕರಣದ ಎರಡನೇ ಆರೋಪಿ ತರುಣ್ ರಾಜುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.</p>.<p>ಜಾಮೀನು ಕೋರಿ ತರುಣ್ ರಾಜು, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತರುಣ್ ರಾಜು ಮನವಿಗೆ ಆಕ್ಷೇಪಣೆ ಸಲ್ಲಿಸಲು ಡಿಆರ್ಐ ಪರ ವಕೀಲರು ಕಾಲಾವಕಾಶ ಕೇಳಿರುವುದರಿಂದ ಅರ್ಜಿ ವಿಚಾರಣೆಯನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿ, ಆಕ್ಷೇಪಣೆ ಸಲ್ಲಿಸುವಂತೆ ಡಿಆರ್ಐ ಅಧಿಕಾರಿಗಳಿಗೆ ಸೂಚಿಸಿದೆ.</p>.ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ED ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>