<p>ಕೆ.ಆರ್.ಪುರ: ‘ಕೊರೊನಾ ಸೋಂಕಿನಿಂದ ಎದುರಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯನ್ನುಡಿ.ಕೆ.ಶಿವಕುಮಾರ್ ಅವರುರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಆರೋಪಿಸಿದ್ದಾರೆ.</p>.<p>ಕ್ಷೇತ್ರದ ಮಾರುಕಟ್ಟೆಗೆಶುಕ್ರವಾರ ತಡರಾತ್ರಿ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್, ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ‘ಮಧ್ಯರಾತ್ರಿ ಅವರು ಕೆ.ಆರ್.ಪುರಕ್ಕೆ ಬರುವಂತಹ ಅಗತ್ಯ ಏನಿತ್ತು’ ಎಂದು ಪ್ರಶ್ನಿಸಿದ್ದಾರೆ.</p>.<p>‘ಸಾವಿರಾರು ರೈತರು ಮಾರುಕಟ್ಟೆಯಲ್ಲಿ ಸೇರುವುದರಿಂದ ಅಂತರ ಕಾಯ್ದುಕೊಳ್ಳುವಂತೆ ಪೊಲೀಸರು ಹೇಳಿರುತ್ತಾರೆ. ಅದನ್ನೇ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದು ಸರಿಯಲ್ಲ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಯಡಿಯೂರಪ್ಪ ನೇತೃತ್ವದ ಸರ್ಕಾರ ರೈತರ ಅಭಿವೃದ್ಧಿಗೆ ಮಹತ್ವ ನೀಡುತ್ತಿದೆ. ರೈತರಿಂದ ನೇರವಾಗಿ ತರಕಾರಿ ಖರೀದಿ ಮಾಡಲಾಗುತ್ತಿದೆ.ಬಿಜೆಪಿ ಸರ್ಕಾರ ಕೊರೊನಾ ಪರಿಸ್ಥಿತಿಯನ್ನು ಒಗ್ಗಟ್ಟಾಗಿ ಎದುರಿಸುತ್ತಿದೆ. ಆದರೆ, ಡಿ.ಕೆ ಶಿವಕುಮಾರ್ ಅವರು ಉದ್ದೇಶಪೂರ್ವಕವಾಗಿ ಪಿತೂರಿ ನಡೆಸುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p>ಇದೇ ವೇಳೆ ಕೆ.ಆರ್.ಪುರ ಸಮೀಪದ ಬಿವಿಎನ್ಎಚ್ಎಸ್ ಶಾಲೆ ಆವರಣದಲ್ಲಿ ಬಿಜೆಪಿ ಮುಖಂಡ ಚನ್ನಕೇಶವ ನೇತೃತ್ವದಲ್ಲಿ ಸಾರ್ವಜನಿಕರಿಗೆ ಹತ್ತು ಸಾವಿರ ತರಕಾರಿ ಕಿಟ್ಗಳನ್ನು ಬೈರತಿ ಬಸವರಾಜ್ ವಿತರಿಸಿದರು.</p>.<p>ಬಿಜೆಪಿ ಮುಖಂಡ ದೇವಸಂದ್ರದ ಚನ್ನಕೇಶವ ಮಾತನಾಡಿ, ‘ಜನರಿಗೆ ನೆರವಾಗುವ ಉದ್ದೇಶದಿಂದಚಿಕ್ಕಬಳ್ಳಾಪುರ ಮತ್ತು ಕೋಲಾರದ ರೈತರಿಗೆ ಮುಂಗಡ ಹಣ ನೀಡಿ ತರಕಾರಿಗಳನ್ನು ಖರೀದಿಸಿದ್ದೇವೆ. ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಡ ಜನರಿಗೆ ತರಕಾರಿ ವಿತರಿಸುತ್ತಿದ್ದೇವೆ’ ಎಂದು ಹೇಳಿದರು.</p>.<p>ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಬಿಜೆಪಿ ಯುವ ಮುಖಂಡ ಚನ್ನಕೇಶವ, ಪಾಲಿಕೆ ಸದಸ್ಯರಾದ ಜಯಪ್ರಕಾಶ್, ಶ್ರೀಕಾಂತ್, ಮಾಜಿ ಪಾಲಿಕೆ ಸದಸ್ಯ ಅಂಥೋನಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪುರ: ‘ಕೊರೊನಾ ಸೋಂಕಿನಿಂದ ಎದುರಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯನ್ನುಡಿ.ಕೆ.ಶಿವಕುಮಾರ್ ಅವರುರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಆರೋಪಿಸಿದ್ದಾರೆ.</p>.<p>ಕ್ಷೇತ್ರದ ಮಾರುಕಟ್ಟೆಗೆಶುಕ್ರವಾರ ತಡರಾತ್ರಿ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್, ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ‘ಮಧ್ಯರಾತ್ರಿ ಅವರು ಕೆ.ಆರ್.ಪುರಕ್ಕೆ ಬರುವಂತಹ ಅಗತ್ಯ ಏನಿತ್ತು’ ಎಂದು ಪ್ರಶ್ನಿಸಿದ್ದಾರೆ.</p>.<p>‘ಸಾವಿರಾರು ರೈತರು ಮಾರುಕಟ್ಟೆಯಲ್ಲಿ ಸೇರುವುದರಿಂದ ಅಂತರ ಕಾಯ್ದುಕೊಳ್ಳುವಂತೆ ಪೊಲೀಸರು ಹೇಳಿರುತ್ತಾರೆ. ಅದನ್ನೇ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದು ಸರಿಯಲ್ಲ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಯಡಿಯೂರಪ್ಪ ನೇತೃತ್ವದ ಸರ್ಕಾರ ರೈತರ ಅಭಿವೃದ್ಧಿಗೆ ಮಹತ್ವ ನೀಡುತ್ತಿದೆ. ರೈತರಿಂದ ನೇರವಾಗಿ ತರಕಾರಿ ಖರೀದಿ ಮಾಡಲಾಗುತ್ತಿದೆ.ಬಿಜೆಪಿ ಸರ್ಕಾರ ಕೊರೊನಾ ಪರಿಸ್ಥಿತಿಯನ್ನು ಒಗ್ಗಟ್ಟಾಗಿ ಎದುರಿಸುತ್ತಿದೆ. ಆದರೆ, ಡಿ.ಕೆ ಶಿವಕುಮಾರ್ ಅವರು ಉದ್ದೇಶಪೂರ್ವಕವಾಗಿ ಪಿತೂರಿ ನಡೆಸುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p>ಇದೇ ವೇಳೆ ಕೆ.ಆರ್.ಪುರ ಸಮೀಪದ ಬಿವಿಎನ್ಎಚ್ಎಸ್ ಶಾಲೆ ಆವರಣದಲ್ಲಿ ಬಿಜೆಪಿ ಮುಖಂಡ ಚನ್ನಕೇಶವ ನೇತೃತ್ವದಲ್ಲಿ ಸಾರ್ವಜನಿಕರಿಗೆ ಹತ್ತು ಸಾವಿರ ತರಕಾರಿ ಕಿಟ್ಗಳನ್ನು ಬೈರತಿ ಬಸವರಾಜ್ ವಿತರಿಸಿದರು.</p>.<p>ಬಿಜೆಪಿ ಮುಖಂಡ ದೇವಸಂದ್ರದ ಚನ್ನಕೇಶವ ಮಾತನಾಡಿ, ‘ಜನರಿಗೆ ನೆರವಾಗುವ ಉದ್ದೇಶದಿಂದಚಿಕ್ಕಬಳ್ಳಾಪುರ ಮತ್ತು ಕೋಲಾರದ ರೈತರಿಗೆ ಮುಂಗಡ ಹಣ ನೀಡಿ ತರಕಾರಿಗಳನ್ನು ಖರೀದಿಸಿದ್ದೇವೆ. ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಡ ಜನರಿಗೆ ತರಕಾರಿ ವಿತರಿಸುತ್ತಿದ್ದೇವೆ’ ಎಂದು ಹೇಳಿದರು.</p>.<p>ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಬಿಜೆಪಿ ಯುವ ಮುಖಂಡ ಚನ್ನಕೇಶವ, ಪಾಲಿಕೆ ಸದಸ್ಯರಾದ ಜಯಪ್ರಕಾಶ್, ಶ್ರೀಕಾಂತ್, ಮಾಜಿ ಪಾಲಿಕೆ ಸದಸ್ಯ ಅಂಥೋನಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>