<p><strong>ಬೆಂಗಳೂರು</strong>: ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್ಗೆ ನಾಲ್ಕು ಕಡೆಗಳಿಂದ ಪ್ರವೇಶ ಕಲ್ಪಿಸಲು ಅನುವಾಗುವಂತೆ ಎಲಿವೇಟೆಡ್ ರೋಟರಿ (ಮೇಲ್ಸೇತುವೆ) ನಿರ್ಮಿಸಲು ₹345 ಕೋಟಿ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.</p>.<p>ಹವಾನಿಯಂತ್ರಿತ ವ್ಯವಸ್ಥೆಯೊಂದಿಗೆ ನಿರ್ಮಾಣವಾಗಿರುವ ಟರ್ಮಿನಲ್ಗೆ ಸೂಕ್ತವಾದ ಸಂಪರ್ಕ ಮಾರ್ಗಗಳಿಲ್ಲ. ಆದ್ದರಿಂದ ನಗರದಲ್ಲಿ ಪ್ರಥಮವಾಗುವ ಈ ಯೋಜನೆಯನ್ನು ವಿನ್ಯಾಸ, ನಿರ್ಮಾಣ, ನಿರ್ವಹಣೆ, ವರ್ಗಾವಣೆ (ಡಿಬಿಒಟಿ) ಮಾದರಿಯಲ್ಲಿ ನಿರ್ಮಿಸಲು ಅನುದಾನ ನೀಡಲು ನಗರಾಭಿವೃದ್ಧಿ ಇಲಾಖೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪತ್ರ ಬರೆದಿದ್ದಾರೆ.</p>.<p>ಮಾರುತಿಸೇವಾನಗರ, ಬಾಣಸವಾಡಿ, ಕಮ್ಮನಹಳ್ಳಿ ಮತ್ತು ಬೈಯಪ್ಪನಹಳ್ಳಿಯನ್ನು ಈ ಮೇಲ್ಸೇತುವೆ ಸಂಪರ್ಕಿಸಲಿದೆ. ರೈಲ್ವೆ ಮೇಲ್ಸೇತುವೆ ಇಲ್ಲಿದ್ದು, ಇದನ್ನು ನೆಲಸಮಗೊಳಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಭೂಸ್ವಾಧೀನಕ್ಕೆ ಪ್ರತ್ಯೇಕವಾಗಿ ₹68 ಕೋಟಿ ಅಂದಾಜು ಮಾಡಲಾಗಿದೆ. ಎಲಿವೇಟೆಡ್ ಕಾರಿಡಾರ್ ನಿರ್ಮಿಸಲು ನೈರುತ್ಯ ರೈಲ್ವೆ ಮತ್ತು ಸಬ್ಅರ್ಬನ್ ರೈಲ್ವೆ ಪ್ರಾಧಿಕಾರ (ಕೆ–ರೈಡ್) ನಿರಾಕ್ಷೇಪಣಾ ಪತ್ರ ನೀಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್ಗೆ ನಾಲ್ಕು ಕಡೆಗಳಿಂದ ಪ್ರವೇಶ ಕಲ್ಪಿಸಲು ಅನುವಾಗುವಂತೆ ಎಲಿವೇಟೆಡ್ ರೋಟರಿ (ಮೇಲ್ಸೇತುವೆ) ನಿರ್ಮಿಸಲು ₹345 ಕೋಟಿ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.</p>.<p>ಹವಾನಿಯಂತ್ರಿತ ವ್ಯವಸ್ಥೆಯೊಂದಿಗೆ ನಿರ್ಮಾಣವಾಗಿರುವ ಟರ್ಮಿನಲ್ಗೆ ಸೂಕ್ತವಾದ ಸಂಪರ್ಕ ಮಾರ್ಗಗಳಿಲ್ಲ. ಆದ್ದರಿಂದ ನಗರದಲ್ಲಿ ಪ್ರಥಮವಾಗುವ ಈ ಯೋಜನೆಯನ್ನು ವಿನ್ಯಾಸ, ನಿರ್ಮಾಣ, ನಿರ್ವಹಣೆ, ವರ್ಗಾವಣೆ (ಡಿಬಿಒಟಿ) ಮಾದರಿಯಲ್ಲಿ ನಿರ್ಮಿಸಲು ಅನುದಾನ ನೀಡಲು ನಗರಾಭಿವೃದ್ಧಿ ಇಲಾಖೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪತ್ರ ಬರೆದಿದ್ದಾರೆ.</p>.<p>ಮಾರುತಿಸೇವಾನಗರ, ಬಾಣಸವಾಡಿ, ಕಮ್ಮನಹಳ್ಳಿ ಮತ್ತು ಬೈಯಪ್ಪನಹಳ್ಳಿಯನ್ನು ಈ ಮೇಲ್ಸೇತುವೆ ಸಂಪರ್ಕಿಸಲಿದೆ. ರೈಲ್ವೆ ಮೇಲ್ಸೇತುವೆ ಇಲ್ಲಿದ್ದು, ಇದನ್ನು ನೆಲಸಮಗೊಳಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಭೂಸ್ವಾಧೀನಕ್ಕೆ ಪ್ರತ್ಯೇಕವಾಗಿ ₹68 ಕೋಟಿ ಅಂದಾಜು ಮಾಡಲಾಗಿದೆ. ಎಲಿವೇಟೆಡ್ ಕಾರಿಡಾರ್ ನಿರ್ಮಿಸಲು ನೈರುತ್ಯ ರೈಲ್ವೆ ಮತ್ತು ಸಬ್ಅರ್ಬನ್ ರೈಲ್ವೆ ಪ್ರಾಧಿಕಾರ (ಕೆ–ರೈಡ್) ನಿರಾಕ್ಷೇಪಣಾ ಪತ್ರ ನೀಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>