<p>ಕೆ.ಆರ್.ಪುರ: ಮತ್ತೊಬ್ಬ ರಾವಣ ಹುಟ್ಟಿ ಬಂದರು ಬಜರಂಗದಳವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.</p>.<p>ಮಹದೇವಪುರ ಕ್ಷೇತ್ರದ ಗ್ರಾಮಾಂತರ ಭಾಗದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.</p>.<p>ಬಜರಂಗದಳ ನ್ನು ನಿಷೇಧ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅಪಾರ ಸಂಖ್ಯೆಯ ಹನುಮಂತ ಭಕ್ತರನ್ನು ಒಳಗೊಂಡಿರುವ ಬಜರಂಗದಳದವರನ್ನು ಕೆರಳಿಸಿದೆ ಎಂದು ಹೇಳಿದರು.</p>.<p>ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರವು ₹ 100 ಕೋಟಿ ಬಿಡುಗಡೆ ಮಾಡಿದೆ. ಆದರೆ, ಕಾಂಗ್ರೆಸ್ ಹನುಮ ಭಕ್ತರನ್ನು ಭಯೋತ್ಪಾದಕರಂತೆ ಕಾಣುತ್ತಿರುವುದು ವಿಪರ್ಯಾಸ ಎಂದರು ಹೇಳದರು.</p>.<p>ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ, ಅರವಿಂದ ಲಿಂಬಾವಳಿ ಅವರ ಹಾದಿಯಲ್ಲೆ ಕ್ಷೇತ್ರದ ಅಭಿವೃದ್ದಿ ಮುಂದುವರೆಯಲು ಬಿಜೆಪಿಗೆ ಮತ ನೀಡಿ, ನಿಮ್ಮ ಅಭಿಮಾನ ಉಳಿಸಿಕೊಳ್ಳುತ್ತೇವೆ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪುರ: ಮತ್ತೊಬ್ಬ ರಾವಣ ಹುಟ್ಟಿ ಬಂದರು ಬಜರಂಗದಳವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.</p>.<p>ಮಹದೇವಪುರ ಕ್ಷೇತ್ರದ ಗ್ರಾಮಾಂತರ ಭಾಗದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.</p>.<p>ಬಜರಂಗದಳ ನ್ನು ನಿಷೇಧ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅಪಾರ ಸಂಖ್ಯೆಯ ಹನುಮಂತ ಭಕ್ತರನ್ನು ಒಳಗೊಂಡಿರುವ ಬಜರಂಗದಳದವರನ್ನು ಕೆರಳಿಸಿದೆ ಎಂದು ಹೇಳಿದರು.</p>.<p>ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರವು ₹ 100 ಕೋಟಿ ಬಿಡುಗಡೆ ಮಾಡಿದೆ. ಆದರೆ, ಕಾಂಗ್ರೆಸ್ ಹನುಮ ಭಕ್ತರನ್ನು ಭಯೋತ್ಪಾದಕರಂತೆ ಕಾಣುತ್ತಿರುವುದು ವಿಪರ್ಯಾಸ ಎಂದರು ಹೇಳದರು.</p>.<p>ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ, ಅರವಿಂದ ಲಿಂಬಾವಳಿ ಅವರ ಹಾದಿಯಲ್ಲೆ ಕ್ಷೇತ್ರದ ಅಭಿವೃದ್ದಿ ಮುಂದುವರೆಯಲು ಬಿಜೆಪಿಗೆ ಮತ ನೀಡಿ, ನಿಮ್ಮ ಅಭಿಮಾನ ಉಳಿಸಿಕೊಳ್ಳುತ್ತೇವೆ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>